News Karnataka Kannada
Monday, April 29 2024
ಮೈಸೂರು

ಮೈಸೂರಲ್ಲಿ ಮುಂದುವರಿದ ಲಾರಿ ಚಾಲಕರ ಮುಷ್ಕರ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಮೋಟಾರ್ ಕಾಯ್ದೆ ವಿರೋಧಿಸಿ ಲಾರಿ ಮಾಲೀಕರು, ಚಾಲಕರ ಸಂಘಟನೆಗಳ ಒಕ್ಕೂಟ ಹಾಗೂ ಖಾಸಗಿ  ಬಸ್‌ಗಳ ಚಾಲಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಪ್ರತಿಭಟನೆ ಮುಂದುವರೆದಿದೆ.
Photo Credit : By Author

ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಮೋಟಾರ್ ಕಾಯ್ದೆ ವಿರೋಧಿಸಿ ಲಾರಿ ಮಾಲೀಕರು, ಚಾಲಕರ  ಸಂಘಟನೆಗಳ ಒಕ್ಕೂಟ ಹಾಗೂ ಖಾಸಗಿ ಬಸ್‌ಗಳ ಚಾಲಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಪ್ರತಿಭಟನೆ ಮುಂದುವರೆದಿದೆ.

ಜಿಲ್ಲೆಯಾದ್ಯಂತ ಲಾರಿಗಳ ಸಂಚಾರ ಸ್ಥಗಿತಗೊಂಡಿದೆ. ಅಗತ್ಯ ವಸ್ತುಗಳಾದ ಔಷಧ, ಹಾಲು ಮುಂತಾದ ಸಾಗಣಿಕೆಗೆ ಮಾತ್ರ  ಅವಕಾಶ ನೀಡಿದ್ದು, ಉಳಿದಂತೆ ಎಲ್ಲಾ ಬಗೆಯ ವಸ್ತುಗಳ ಸಾಗಣಿಕೆಯನ್ನು ಬಂದ್ ಮಾಡಿದ್ದಾರೆ. ಕೆಲವೆಡೆ ಖಾಸಗಿ ಬಸ್ ಚಾಲಕರೂ ಈ ಮುಷ್ಕರದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಆದರೆ, ಬೆರಳೆಣಿಕೆಯಷ್ಟು ಬಸ್ ಮತ್ತು ಸರಕು ಸಾಗಾಣಿಕೆ ವಾಹನಗಳು ಮಾತ್ರ ಸಂಚರಿಸಿದವು.

ನೂತನ ಮೋಟಾರ್ ಕಾಯ್ದೆ ವಾಪಸ್ ಪಡೆಯುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಚಾಲಕರು ಎಚ್ಚರಿಸಿದರು.  ಲಾರಿಗಳ ಮಾಲೀಕರು ಮತ್ತು ಚಾಲಕರು ಪ್ರತಿಭಟನೆಯಲ್ಲಿ ಪಾಲ್ಗೊಂಡ ಹಿನ್ನೆಲೆಯಲ್ಲಿ ಹಣ್ಣು ಮತ್ತು ತರಕಾರಿ ಸಾಗಣಿಕೆಗೆ ಗೂಡ್ಸ್ ಆಟೋಗಳನ್ನು ಅವಲಂಬಿಸಬೇಕಾಯಿತು. ಆದರೆ ಹಳೇ ಸಂತೆಪೇಟೆ ಬಳಿ ಸರಕು ಸಾಗಣಿಕೆ ಆಟೋಗಳನ್ನು ತಡೆದು ಅವುಗಳ ಗ್ಲಾಸಿಗೆ ಬಂದ್‌ನ ಕರಪತ್ರಗಳನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಲಾರಿ ಚಾಲಕರು ಮತ್ತು ಮಾಲೀಕರ ಸಂಘದ ಪದಾಧಿಕಾರಿಗಳು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು