News Karnataka Kannada
Sunday, May 05 2024
ಮೈಸೂರು

ಎಂ.ಬಿ.ಪಾಟೀಲ್‌ಗೆ ಚಿಲ್ಲರೆ ಚಿಂತೆ: ಪ್ರತಾಪ್ ಸಿಂಹ ಟಾಂಗ್

Pratap Simha
Photo Credit : By Author

ಮೈಸೂರು: ಪ್ರತಾಪ್ ಸಿಂಹ ಚಿಲ್ಲರೆ ರಾಜಕಾರಣ ಬಿಡಲಿ ಎಂಬ ಎಂ.ಬಿ.ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿದ ಸಂಸದ ಪ್ರತಾಪಸಿಂಹ, ಎಂ.ಬಿ.ಪಾಟೀಲ್‌ಗೆ ಈಗ ಸಿಕ್ಕಿರೋ ಖಾತೆಯಲ್ಲಿ ಬರೀ ಚಿಲ್ಲರೆ ಸಿಗುತ್ತದೆ. ಕೂತ ಕಡೆ ಕಂತೆ ಕಂತೆ ಕಾಸು ಬರುವ ಖಾತೆ ಸಿಗಲಿಲ್ಲ ಎಂದು ವಿಲ ವಿಲ ಒದ್ದಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಟೀಲ್ ಅವರಿಗೆ ಕೇವಲ ಚಿಲ್ಲರೆ, ನೋಟಿನ ಬಗ್ಗೆ ಮಾತ್ರ ಚಿಂತೆ. ಸಿದ್ದರಾಮಯ್ಯರ ಓಲೈಕೆಯೇ ತಮ್ಮ ಖಾತೆಯ ಜವಾಬ್ದಾರಿ ಎಂದುಕೊಂಡಿದ್ದಾರೆ. ಸಿದ್ದರಾಮಯ್ಯ ಬಂದೂಕಿಗೆ ಹೆಗಲು ಕೊಡೋದೆ ನಿಮ್ಮ ಕೆಲಸವಾ? ಸಂತೋಷ್ ಅವರ ಬಗ್ಗೆ ಪದೇ ಪದೇ ಯಾಕೆ ಮಾತನಾಡುತ್ತೀರಿ. ಬ್ರಾಹ್ಮಣರನ್ನು ದಿನವೂ ಯಾಕೆ ಬೈಯ್ಯುತ್ತೀರಿ? ಯಾಕೆ ನಿಮಗೆ ಬ್ರಾಹ್ಮಣರ ಮೇಲೆ ಇಷ್ಟು ದ್ವೇಷ? ಬಸವೇಶ್ವರರು ಮೂಲದಲ್ಲಿ ಬ್ರಾಹ್ಮಣರಲ್ಲವಾ? ಎಂ ಬಿ ಪಾಟೀಲ್‌ರೇ ನೀವು ನಿಜವಾಗಲೂ ಲಿಂಗಾಯತರಾ? ಯಡಿಯೂರಪ್ಪ ಅವರನ್ನು ಜೈಲಿಗೆ ಕಳಿಸಿದ್ದು ಕಾಂಗ್ರೆಸ್ ಕುತಂತ್ರವಲ್ಲವೇ? ಯಡಿಯೂರಪ್ಪ ವಿರುದ್ದ ಷಡ್ಯಂತ್ರ ಮಾಡಲು ಕಾಂಗ್ರೆಸ್‌ನಿಂದ ಸುಫಾರಿ ತೆಗೆದು ಕೊಂಡವರು ನೀವೆ ತಾನೇ? ಸಿದ್ದರಾಮಯ್ಯ ಲಿಂಗಾಯತ ಧರ್ಮ ಒಡೆಯಲು ಹೋದಾಗ ಅದರ ಸುಫಾರಿ ಪಡೆದವರು ಯಾರು? ಈಗ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಎನ್ನುವ ಮೂಲಕ ಒಕ್ಕಲಿಗರನ್ನು ಮುಗಿಸಲು ಹೊರಟಿರುವ ಎಂಬಿ ಪಾಟೀಲ್ ಸಿದ್ದರಾಮಯ್ಯರ ಚೇಲಾ ಪಡೆಯ ಅಧ್ಯಕ್ಷ ಎಂದು ಟಾಂಗ್ ಕೊಟ್ಟರು.

ಅಕ್ಕಿ ವಿಚಾರದಲ್ಲಿ ಕೇಂದ್ರದ ಮೇಲೆ ಬಿಜೆಪಿ ಒತ್ತಡ ತರಲಿ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ವಿಚಾರ, ೫ ಕೆಜಿ ಅಕ್ಕಿ ಕೊಡುವುದು ಕೇಂದ್ರ ಸರಕಾರವೆಂದು ಪ್ರಥಮ ಬಾರಿಗೆ ಸತ್ಯ ಹೇಳಿದ್ದಕ್ಕೆ ಧನ್ಯವಾದ. ಮೋದಿ ಅವರ ಐದು ಕೆಜಿಗೆ 10 ಕೆಜಿ ಸೇರಿಸಿ ಕೊಡಬೇಕು ನೀವು. ಯಾರದೋ ದುಡ್ಡು ಕಾಂಗ್ರೆಸ್ ಜಾತ್ರೆ ನಾ ಇದು? ಮೋದಿ ಸರಕಾರದ ಅಕ್ಕಿ ಸಿದ್ರಾಮಣ್ಣನ ಜಾತ್ರೆನಾ? ಮೋದಿ ಅವರು ಅಕ್ಕಿ ಕೊಡಲು ನೀವು ಚುನಾವಣೆ ಗೆದ್ದು ಬರಬೇಕಾ? ಓಪನ್ ಮಾರ್ಕೆಟ್‌ನಲ್ಲಿ ಅಕ್ಕಿ ಖರೀದಿ ಮಾಡಿ. ಅಕ್ಕಿ ಖರೀದಿ ಆಗದಿದ್ದರೆ ಗಂಡನ ಅಕೌಂಟ್‌ಗೆ ಅಕ್ಕಿಯ ಹಣ ಹಾಕಿ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು