News Karnataka Kannada
Saturday, May 11 2024
ಮೈಸೂರು

ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ನಂಜನಗೂಡಿನಲ್ಲಿ ಬೃಹತ್ ಪ್ರತಿಭಟನೆ

Massive protest in Nanjangud against release of water to Tamil Nadu
Photo Credit : News Kannada

ನಂಜನಗೂಡು: ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ನಂಜನಗೂಡಿನಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಂಜನಗೂಡು ನಗರದ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರರ ಕಛೇರಿಗೆ ಮುತ್ತಿಗೆ ಹಾಕಿ, ನೂರಾರು ರೈತರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಮಾತನಾಡಿ, ಕಪಿಲ ನದಿ ಮತ್ತು ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಕೆರೆಕಟ್ಟೆಗಳು ಬತ್ತಿ ಹೋಗಿವೆ ಗದ್ದೆಗಳಲ್ಲಿ ಬೆಳೆಗಳು ಒಣಗುತ್ತಿವೆ. ಮೊದಲು ನಮಗೆ ನೀರು ಬಿಡಿ ಎಂದು ಒತ್ತಾಯ ಮಾಡಿದರು.

ಕಬಿನಿ ಬಲದಂಡೆ ನಾಲೆಯ ಮೂಲಕ ನೀರು ತಮಿಳುನಾಡಿಗೆ ಹೋಗುತ್ತಿದ್ದು, ಎಲ್ಲಾ ಅಣೆಕಟ್ಟೆಗಳನ್ನು ತಮಿಳುನಾಡಿಗೆ ಬರೆದು ಕೊಡಿ. ಕೇಂದ್ರ ಸರ್ಕಾರ ಕರ್ನಾಟಕದ ಪರವಾಗಿಲ್ಲ. ತಮಿಳುನಾಡು ಪರವಾಗಿದೆ. ಕೂಡಲೇ ನಮ್ಮ ಕೆರೆ ಕಟ್ಟೆಗಳಿಗೆ, ನಾಲೆಗಳಿಗೆ ಮೊದಲು ನೀರು ಬಿಡಿ.

ಮೇಕೆದಾಟು ಯೋಜನೆ ಮಾಡುವುದರಿಂದ ತಮಿಳುನಾಡು ಅಡ್ಡಗಾಲು ಹಾಕುತ್ತದೆ. ಕೇಂದ್ರ ಮತ್ತು ತಮಿಳುನಾಡು ಸರ್ಕಾರಗಳು ಒಟ್ಟಿಗೆ ಸೇರಿ ಕೆಲಸ ಮಾಡುತ್ತಿರುವುದನ್ನು ನಾವು ಖಂಡಿಸುತ್ತೇವೆ. ಕೂಡಲೇ ರಾಜ್ಯ ಸರ್ಕಾರ ನಮ್ಮ ನಾಲೆಗಳಿಗೆ, ಕೆರೆಕಟ್ಟೆಗಳಿಗೆ ನೀರು ಬಿಡಬೇಕು ಎಂದು ಒತ್ತಾಯಿಸಿದರು.

ಈ‌ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ಮಾವು ರಘು, ತಾಲ್ಲೂಕು ಅಧ್ಯಕ್ಷ ಸತೀಶ್, ಕೆಂಪಣ್ಣ, ಶಂಕರ್ ನಾಯಕ, ಮಂಜುನಾಥ್, ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು