ನಂಜನಗೂಡು: ಇಂದು ವಿಶ್ವ ಹಾಲು ದಿನಾಚರಣೆಯ ನಿಮಿತ್ತ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಭಾಗವಹಿಸಿ, ನಂಜನಗೂಡು ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ನಂದಿನಿ ಹಾಲಿನ ಉತ್ಪನ್ನಗಳನ್ನು ಕೊಟ್ಟು ಆರೋಗ್ಯ ವಿಚಾರಿಸಿ, ಆಸ್ಪತ್ರೆಯ ಕುಂದುಕೊರತೆಯನ್ನು ಆಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವ ಮೂರ್ತಿ, ಡಿಎಸ್ಒ ಶಿವಪ್ರಸಾದ್, ಟಿಹೆಚ್ಒ ಡಾ. ಈಶ್ವರ್, ಮೈಮುಲ್ ಮಾಜಿ ಅಧ್ಯಕ್ಷರಾದ ಅಳಗಾಂಚಿ ಮಹೇಶ್, ಮೈಮುಲ್ ನಿರ್ದೇಶಕರಾದ ನೀಲಂಬಿಕೆ ಮಹೇಶ್, ಸೇರಿದಂತೆ ಹಲವು ಹಿರಿಯ ವೈದ್ಯರು ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.