ಮೈಸೂರು:- ಮಕ್ಕಳು ಮೊಬೈಲ್ ಫೋನ್ ಗಳ ಬಗ್ಗೆ ಹೆಚ್ಚು ಆಸಕ್ತಿ ಹೊಂದುತ್ತಿದ್ದು, ಓದುವ ಹವ್ಯಾಸ ಕಡಿಮೆ ಇದೆ, ಸಾಹಿತ್ಯಕ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ಪುಸ್ತಕ ಪ್ರೇಮವನ್ನು ಬೆಳೆಸಲು ಸಾಹಿತ್ಯ ಪರಿಷತ್ತು ಮುಂದಾಗಬೇಕು ಎಂದು ಟ್ಯಾಲೆಂಟ್ ಎಜುಕೇಶನ್ ಇನ್ ಸ್ಟಿಟ್ಯೂಟ್ ನ ಮುಖ್ಯಸ್ಥ ನವೀನ್ ರೈ ಹೇಳಿದರು.
ಕುವೆಂಪು ಮಕ್ಕಳ ಸಾಹಿತ್ಯ ಪರಿಷತ್ತು ನ.25ರ ಶುಕ್ರವಾರ ಟ್ಯಾಲೆಂಟ್ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಪರಿಷತ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಓದು ಮಾತ್ರ ಮಕ್ಕಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಬೆಳೆಸಲು ಸಾಧ್ಯ ಎಂಬ ಲೇಖಕರ ಅಭಿಪ್ರಾಯವನ್ನು ಪರಿಗಣಿಸಿ, ಪ್ರತಿ ವರ್ಷ ನಮ್ಮ ಶಾಲೆಯಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ ಎಂದರು. ಮುಂದಿನ ದಿನಗಳಲ್ಲಿ ಮಕ್ಕಳು ಸಾಹಿತ್ಯಕ ಚಟುವಟಿಕೆಗಳ ಪುಸ್ತಕವನ್ನು ಹೊರತರುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಲಾಗುವುದು ಎಂದರು.
‘ಶಿಕ್ಷಕರು ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ, ಎಲ್ಲಾ ಶಾಲೆಗಳ ಮಕ್ಕಳಲ್ಲಿ ಇಂತಹ ಪ್ರವೃತ್ತಿಯನ್ನು ಬೆಳೆಸಬೇಕು” ಎಂದು ಅವರು ಹೇಳಿದರು.