ಮೈಸೂರು: ನಟ ಶಿವರಾಜ್ ಕುಮಾರ್ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರ ಪ್ರಚಾರ ನಡೆಸುತ್ತಿದ್ದಾರೆ. ಈ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಟ್ವಿಟರ್ ಮತ್ತು ಫೇಸ್ ಬುಕ್ ನಲ್ಲಿ ಶಿವಣ್ಣಗೆ ಟಾಂಗ್ ನೀಡಿದ್ದಾರೆ.
ದಿವಂಗತ ನಟ ಪುನೀತ್ ರಾಜ್ಕುಮಾರ್ ಹೆಸರಿನಲ್ಲಿ ಸಚಿವ ವಿ ಸೋಮಣ್ಣ ಆಸ್ಪತ್ರೆ ನಿರ್ಮಿಸಿದ್ದಾರೆ. ಈ ಆಸ್ಪತ್ರೆಯ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದ ರಾಘವೇಂದ್ರ ರಾಜ್ಕುಮಾರ್, ಸೋಮಣ್ಣ ಅವರ ಕಾರ್ಯವನ್ನು ಶ್ಲಾಘಿಸಿದ್ದರು. ಆದರೆ ಪುನೀತ್ ಸಹೋದರ ಶಿವರಾಜ್ ಕುಮಾರ್ ಸಿದ್ದರಾಮಯ್ಯ ಪರ ಪ್ರಚಾರ ಮಾಡುತ್ತಿದ್ದಾರೆ ಎಂದಿದ್ದಾರೆ.
ಪ್ರತಾಪ್ ಸಿಂಹ ಗುರುವಾರ ಟ್ವೀಟ್ ಮಾಡಿ, “ಸೋಮಣ್ಣ, ಸಾವಿರಾರು ಜನರಿಗೆ ಅನುಕೂಲ ಮಾಡಿಕೊಡಲು ಪುನೀತ್ ರಾಜ್ಕುಮಾರ್ ಸರ್ ಹೆಸರಿನಲ್ಲಿ ಆಸ್ಪತ್ರೆ ನಿರ್ಮಿಸಿದ್ದರು. ಅವರ ಕಾರ್ಯವನ್ನು ರಾಘಣ್ಣ ಮೆಚ್ಚಿದ್ದರು. ಆದರೆ ಶಿವಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರ ಮಾಡಿದರು ಎಂದು ತಿಳಿಸಿದ್ದಾರೆ. ರಾಘಣ್ಣ ಸೋಮಣ್ಣನನ್ನು ಹೊಗಳಿರುವ ವಿಡಿಯೋ ಮತ್ತು ಶಿವಣ್ಣ ಸಿದ್ದರಾಮಯ್ಯ ಪರ ಪ್ರಚಾರ ಮಾಡುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ ಅವರು ಡಾ.ರಾಜ್ ಕುಟುಂಬವನ್ನು ರಾಜಕೀಯದ ಹೊರತಾಗಿ ನೋಡುತ್ತಾರೆ. ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸಿದ್ದರು. ಆಗಲೂ ನಟ ಶಿವರಾಜಕುಮಾರ್ ಪ್ರಚಾರಕ್ಕೆ ಹೋಗಿರಲಿಲ್ಲ. ಡಾ. ರಾಜ್ ಕುಟುಂಬವನ್ನು ರಾಜಕೀಯವನ್ನು ಮೀರಿ ನೋಡುತ್ತಾರೆ ಎಂದರು.