ಮೈಸೂರು

ಮೈಸೂರು: ಅನಧಿಕೃತವಾಗಿ ಮದ್ಯ ಮಾರಾಟ ಮಾಡಿದರೆ ಕ್ರಮ

ಮೈಸೂರು: ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು ಜಿಲ್ಲೆಯಲ್ಲಿ ಅನಧಿಕೃತ ಮಧ್ಯ ಮಾರಾಟ ಕಂಡುಬಂದರೆ ಪ್ರಕರಣ ದಾಖಲಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಬಕಾರಿ ಇಲಾಖೆ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೆಚ್.ಡಿ.ಕೋಟೆ, ಸರಗೂರು ಗುಡ್ಡಗಾಡು ಪ್ರದೇಶದಲ್ಲಿ ಕಳ್ಳಭಟ್ಟಿ ಪ್ರಕರಣಗಳು ಕಂಡುಬಂದರೆ ಕೂಡಲೇ ಕಾನೂನು ರೀತಿ ಕ್ರಮಕೈಗೊಳ್ಳಬೇಕು. ಪ್ರತಿದಿನ ಲಿಕ್ಕರ್ ಶಾಪ್‌ಗಳಿಗೆ ಭೇಟಿ ನೀಡಬೇಕು. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು ಈ ಸಂದರ್ಭದಲ್ಲಿ ಆಮಿಷವೊಡ್ಡಲು ಲಿಕ್ಕರ್ ಶಾಪ್‌ಗಳಲ್ಲಿ ಹಾಗೂ ಬಾರ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಜನರಿಗೆ ಲಿಕ್ಕರ್ ನೀಡಿ ಬೇರೆಯವರು ದುಡ್ಡು ಪಾವತಿ ಮಾಡುವ ಬಗ್ಗೆ ಗಮನಹರಿಸಿ. ಈ ಬಗ್ಗೆ ಬಾರ್ ಅಂಡ್ ರೆಸ್ಟೋರೆಂಟ್‌ಗಳ ಮಾಲೀಕರಿಗೆ ಸೂಚಿಸಬೇಕು ಎಂದು ತಿಳಿಸಿದರು.

ಅಬಕಾರಿ ಇಲಾಖೆ ವತಿಯಿಂದ ಚೆಕ್ ಪೋಸ್ಟ್‌ಗಳಲ್ಲಿ ಪರಿಶೀಲನೆ ಮಾಡಬೇಕು. ಮತದಾನದ ಮುಂಚೆ 48 ಗಂಟೆಗಳ ಒಣ ದಿನಗಳಲ್ಲಿ ಲಿಕ್ಕರ್ ನಿಷೇಧವಾಗುವ ಸಂಬಂಧ ಆ ದಿನಗಳಲ್ಲಿ ಅಬಕಾರಿ ಇಲಾಖೆ ಅಗತ್ಯ ಕ್ರಮ ವಹಿಸಬೇಕು ಎಂದರು.

ವಾಣಿಜ್ಯ ತೆರಿಗೆ ಇಲಾಖೆ ಎಲ್ಲ ಚೆಕ್ ಪೋಸ್ಟ್‌ಗಳಲ್ಲಿ ತಮ್ಮ ಇಲಾಖೆಯ ವತಿಯಿಂದ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಕೇರಳದಿಂದ ಬರುವ ಕಮರ್ಷಿಯಲ್ ವಾಹನಗಳ ಪರಿಶೀಲನೆ ಮಾಡಬೇಕು. ಅಂತರಾಜ್ಯ ಗಡಿ ಭಾಗದ ಚೆಕ್‌ಪೋಸ್ಟ್ ಸೇರಿದಂತೆ ವಿವಿಧ ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ ವಾಣಿಜ್ಯ ತೆರಿಗೆಗಳ ಇಲಾಖೆಯವರು ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜನರಿಗೆ ಆಮಿಷವೊಡ್ಡಲು ಹಲವು ಬಗೆಯಲ್ಲಿ ಪ್ರಯತ್ನಗಳು ನಡೆಯುವ ಸಾಧ್ಯತೆಗಳಿರುತ್ತವೆ. ಹೆಚ್ಚಿನ ಮೊತ್ತದ ನಗದು ಹಣ, ಸೀರೆ, ಕುಕ್ಕರ್, ಪಾತ್ರೆ, ಬಟ್ಟೆಗಳು ಮತ್ತಿತರ ಸಾಮಗ್ರಿಗಳನ್ನು ಅಕ್ರಮವಾಗಿ ಸಾಗಣೆ ಮಾಡುವ ಸಂಭವವಿರುತ್ತದೆ. ಹೀಗಾಗಿ ಮೈಯೆಲ್ಲಾ ಕಣ್ಣಾಗಿ, ವಾಹನಗಳ ತಪಾಸಣೆ ನಡೆಸಬೇಕು. ತಪಾಸಣೆ ಕಾರ್ಯದ ವಿಡಿಯೋ ಚಿತ್ರೀಕರಣ ಮಾಡಬೇಕು. ಯಾವುದೇ ಸಾಮಗ್ರಿಗಳ ಸಾಗಣೆ ಬಗ್ಗೆ ಸಂಶಯ ಬಂದಲ್ಲಿ ಸಮಗ್ರವಾಗಿ ತಪಾಸಣೆ ನಡೆಸಿ, ಅಕ್ರಮ ಕಂಡುಬಂದಲ್ಲಿ ಕೂಡಲೆ ಕ್ರಮ ಕೈಗೊಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಚೆಕ್‌ಪೋಸ್ಟ್‌ಗಳು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವುದರಿಂದ, ಸರದಿ ಆಧಾರದಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸಂಬಂಧಪಟ್ಟ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಅಬಕಾರಿ ಇಲಾಖೆಯ ಜಿಲ್ಲಾ ಅಧಿಕಾರಿ ರವಿಶಂಕರ್, ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ ಕಂಬಣ್ಣ ಹಾಗೂ ಅಬಕಾರಿ ಇಲಾಖೆ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳು ಉಪಸ್ಧಿತರಿದ್ದರು.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

1 hour ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

2 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

3 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

3 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

3 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

3 hours ago