ಮೈಸೂರು: ಸಮರ್ಥನಂ ಅಂಗವಿಕಲರ ಸಂಸ್ಥೆಯು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಸ್ವಯಂ ಸೇವಾ ಸಂಸ್ಥೆಯಾಗಿದ್ದು, 1997 ರಿಂದ ಭಾರತದಲ್ಲಿ ದೃಷ್ಠಿಹೀನರ ವಿಕಲಚೇತನರು ಮತ್ತು ಅವಕಾಶ ವಂಚಿತರ ಸಬಲೀಕರಣಕ್ಕಾಗಿ ಕಾರ್ಯನಿರ್ವಹಿಸುತ್ತಿದೆ.
ಪ್ರಮುಖವಾಗಿ ಈ ಸಂಸ್ಥೆಯು ಗುಣಮಟ್ಟದ ಶಿಕ್ಷಣ, ವಸತಿ ಸೌಲಭ್ಯ, ಪೌಷ್ಠಿಕ ಆಹಾರ, ವೃತ್ತಿಪರ ತರಬೇತಿ ಮತ್ತು ಪುನರ್ವಸತೀಕರಣದ ಸೌಲಭ್ಯಗಳನ್ನು ಒದಗಿಸುವ ಮೂಲಕ ವಿಕಲಚೇತನರ ವೈಯಕ್ತಿಕ ಸ್ವಾವಲಂಬನೆಯನ್ನು ಸಾಧಿಸುವದಾಗಿದೆ. ಮತ್ತು ಸಮಾಜದಲ್ಲಿ ತಮ್ಮದೇ ಆಗಿರುವ ಪ್ರಮುಖ ಹೆಜ್ಜೆಯನ್ನು ಇಡುವಲ್ಲಿ ಸಹಾಯಮಾಡುವತ್ತ ಕಾರ್ಯನಿರ್ವಹಿಸುತ್ತಿದೆ.
ಸಂಸ್ಥೆಯು ದೃಷ್ಟಿ ವಿಕಚೇತನರ ಮತ್ತು ಅವಕಾಶ ವಂಚಿತರ ಅಭಿವೃದ್ಧಿಗಾಗಿ ತಾರತಮ್ಯ ರಹಿತ ಅವಕಾಶಗಳನ್ನು ಒದಗಿಸುವ ಕ್ರೂಡಿಕೃತ ಸಮಾಜವನ್ನು ಸೃಷ್ಟಿಸುವ ನಿಟ್ಟಿನಲ್ಲಿ ಈ ಸಂಸ್ಥೆ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತದೆ.
ಸಮರ್ಥನಂ ಅಂಗವಿಕಲರ ಸಂಸ್ಥೆಯು ಮೈಸೂರು ವಿಭಾಗದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ 2022-23ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಪೂರ್ಣಗೊಳಿಸಿ ಉನ್ನತ ಶಿಕ್ಷಣ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.
ಬೇಕಾಗಿರುವ ದಾಖಲಾತಿಗಳು: ಆಧಾರ್ ಕಾರ್ಡ್, ವಿಕಲಚೇತನ ಗುರುತಿನ ಚೀಟಿ ಅಥವಾ ಯುಡಿಐಡಿ ಕಾರ್ಡ್, ಪ್ರಸಕ್ತ ಸಾಲಿನ ಕಾಲೇಜು ಶುಲ್ಕ ಪಾವತಿಸಿದ ರಸೀದಿ, ವಿದ್ಯಾರ್ಥಿ ಬ್ಯಾಂಕ್ ಖಾತೆ ವಿವರ, ಪಾಸ್ ಬುಕ್ ದಾಖಲಾತಿದೊಂದಿಗೆ ದಿನಾಂಕ: ನವೆಂಬರ್ 30, 2022ರ ಒಳಗೆ ಕಛೇರಿ ವಿಳಾಸ ನಂ.11211, ಆಲದ ಮರ ರಸ್ತೆ, ವಿಜಯನಗರ 4ನೇ ಹಂತ, 2ನೇ ಘಟ್ಟ, ಮೈಸೂರು-570032 ತಲಪಿಸಬೇಕು. ಹೆಚ್ಚಿನ ಮಾಹಿತಿಗಾಗಿ 6364867818, 8123725949 ಸಂಪರ್ಕಿಸಬಹುದು.