News Karnataka Kannada
Monday, April 29 2024
ಮೈಸೂರು

ಮೈಸೂರು: ದುಗ್ಗಳ್ಳಿಯಲ್ಲಿ ಅನುಮಾನಸ್ಪದವಾಗಿ ಹಸುಗಳು ಸಾವು

Mysore/Mysuru: Cows found dead under suspicious circumstances in Duggalli
Photo Credit : By Author

ಮೈಸೂರು: ಜಿಲ್ಲೆಯ ಹುಲ್ಲಹಳ್ಳಿ ಸಮೀಪದ ದುಗ್ಗಳ್ಳಿ ಗ್ರಾಮದಲ್ಲಿ ಮೇಯಲು ಬಿಟ್ಟಿದ ಸುಮಾರು ಹತ್ತು ಹಸುಗಳಲ್ಲಿ ಮೂರು ಹಸುಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಇದರಿಂದ ರೈತರು ಕಂಗಲಾಗಿದ್ದಾರೆ.

ಹಳಾಪುರ ಕೆಂಪಣ್ಣ ಮತ್ತು ಸಿದ್ದಪ್ಪ ಎಂಬುವರಿಗೆ ಸೇರಿದ ಹಸುಗಳನ್ನು ಮೇಯಲು ಬಿಟ್ಟಿದ್ದಾಗ ಇದ್ದಕ್ಕಿದ್ದಂತೆ ಎಲ್ಲ ಹಸುಗಳು ಅಸ್ವಸ್ಥಗೊಂಡು ನರಳಾಡುತ್ತಿದ್ದನ್ನು ನೋಡಿದ ಗ್ರಾಮಸ್ಥರು ತಕ್ಷಣವೇ ವೈದ್ಯರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ವೈದ್ಯರು ಹಸುಗಳಿಗೆ ಔಷಧಿ ನೀಡಿ ಉಪಚರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೂರು ಹಸುಗಳು ಸಾವನ್ನಪ್ಪಿವೆ.

ಹಸುಗಳ ಹಠಾತ್ ಸಾವಿನಿಂದ ಹಾಲಿನಿಂದಲೇ ಜೀವನ ನಡೆಸುತ್ತಿದ್ದ ಕೆಂಪಣ್ಣ ಮತ್ತು ಸಿದ್ದಪ್ಪ ಸಂಕಷ್ಟಕ್ಕೀಡಾಗಿದ್ದಾರೆ. ಇಲ್ಲಿ ಶುಂಠಿ ಬೆಳೆಯಲು ಶುಂಠಿ ಬೆಳೆಗಾರರು ಔಷಧಿಯನ್ನು ಸಿಂಪಡಿಸಿದ್ದು, ಅವುಗಳನ್ನು ಹಸುಗಳು ತಿಂದು ಮೃತಪಟ್ಟಿವೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಇನ್ನು ಮುಂದಾದರು ಶುಂಠಿ ಬೆಳೆಗಾರರಿಗೆ ಔಷಧಿ ಸಿಂಪಡಿಸುವಾಗ ಎಚ್ಚರಿಕೆ ವಹಿಸುವಂತೆ ಸೂಚನೆ ನೀಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಹಸುಗಳ ಸಾವಿನಿಂದಾಗಿ ಜೀವನಾಧಾರವನ್ನು ಕಳೆದುಕೊಂಡಿರುವ ರೈತರಿಗೆ ಸರ್ಕಾರವು ಸಹಾಯ ನೀಡಬೇಕೆಂದು ಆಗ್ರಹಿಸಿದ್ದಾರೆ. ಸುದ್ದಿ ತಿಳಿದು ಗ್ರಾಮಕ್ಕೆ ಆಗಮಿಸಿದ ಬಿಜೆಪಿ ಗ್ರಾಮಾಂತರ ತಾಲೂಕು ಅಧ್ಯಕ್ಷ ಹೊರಳವಾಡಿ ಮಹೇಶ್ ಮೃತಪಟ್ಟ ಹಸುಗಳ ಮಾಲೀಕರಿಗೆ ಸರ್ಕಾರದಿಂದ ಬರುವ ಪರಿಹಾರವನ್ನು ಕೊಡಿಸುವ ಭರವಸೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು