News Karnataka Kannada
Sunday, April 28 2024
ಮೈಸೂರು

ಮೈಸೂರು: ಪ್ರತಿ ಮಗು ಶಿಕ್ಷಿತವಾದರೆ ದೇಶದ ಭವಿಷ್ಯ ಉಜ್ವಲ – ಮಿರ್ಲೆ ಶ್ರೀನಿವಾಸ ಗೌಡ

If every child is educated, the future of the country is bright, says Mirle SrinivasGowda
Photo Credit : By Author

ಮೈಸೂರು: ಮಕ್ಕಳ ದಿನಾಚರಣೆ ಅಂಗವಾಗಿ ಮೈಸೂರು ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಮಕ್ಕಳಿಗೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ ಗೌಡ ರವರು ಐಸ್ ಕ್ರೀಮ್, ಚಾಕ್ಲೇಟ್, ತಂಪುಪಾನೀಯ ಮಜ್ಜಿಗೆ ವಿತರಿಸಿ ಗುಲಾಬಿ ಹಾಗೂ ಪೆನ್ ನೀಡಿ ಮಕ್ಕಳ ದಿನಾಚರಣೆಯ ಶುಭಕೋರಿದ್ದಾರೆ.

ಬಳಿಕ ಮಾತನಾಡಿದ ಅವರು ದೇಶದ ಮಕ್ಕಳು ಸಂಭ್ರಮದಿಂದ ಕುಣಿದು ಕುಪ್ಪಳಿಸುವ ಸುದಿನ ಅಂದರೆ ಮಕ್ಕಳ ದಿನಾಚರಣೆಯಾಗಿದೆ. ಇಂದಿನ ಮಕ್ಕಳೇ ದೇಶದ ಮುಂದಿನ‌ ಪ್ರಜೆಗಳು, ದೇಶದ ಪ್ರತಿ ಮಗು ಕೂಡ ವಿದ್ಯಾವಂತನಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿ ಮುಖ್ಯವಾಹಿನಿಗೆ ಬಂದರೆ ದೇಶದ ಭವಿಷ್ಯ ಉಜ್ವಲವಾಗಿರತ್ತದೆ. ಮಕ್ಕಳನ್ನು ಉತ್ತಮ ಮಾರ್ಗದಲ್ಲಿ ಬೆಳೆಸಲು ಪೋಷಕರ ಪಾತ್ರವು ಸಹ ಬಹುಮುಖ್ಯವಾಗಿರುತ್ತದೆ. ಲಾಲನೆ-ಪಾಲನೆಯಲ್ಲಿ ಯಾವುದೇ ಕೊರತೆಯಾಗಬಾರದು. ಮಕ್ಕಳಿಗೆ ಉತ್ತಮ ಅರ್ಹತೆ ಬರುವ ನಿಟ್ಟಿನಲ್ಲಿ ಹಿರಿಯರು ಶ್ರಮವಹಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವ್ಯವಸ್ಥಾಪಕ ಸಿದ್ಧೆಗೌಡ, ಎ.ಈ. ನಾಗೇಂದ್ರ, ಸಾಮಾಜಿಕ ಹೋರಾಟಗಾರ ವಿಕ್ರಂ‌ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ ಮತ್ತಿತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು