ಮೈಸೂರು: ಮಕ್ಕಳ ದಿನಾಚರಣೆ ಅಂಗವಾಗಿ ಮೈಸೂರು ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಮಕ್ಕಳಿಗೆ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೆ ಶ್ರೀನಿವಾಸ ಗೌಡ ರವರು ಐಸ್ ಕ್ರೀಮ್, ಚಾಕ್ಲೇಟ್, ತಂಪುಪಾನೀಯ ಮಜ್ಜಿಗೆ ವಿತರಿಸಿ ಗುಲಾಬಿ ಹಾಗೂ ಪೆನ್ ನೀಡಿ ಮಕ್ಕಳ ದಿನಾಚರಣೆಯ ಶುಭಕೋರಿದ್ದಾರೆ.
ಬಳಿಕ ಮಾತನಾಡಿದ ಅವರು ದೇಶದ ಮಕ್ಕಳು ಸಂಭ್ರಮದಿಂದ ಕುಣಿದು ಕುಪ್ಪಳಿಸುವ ಸುದಿನ ಅಂದರೆ ಮಕ್ಕಳ ದಿನಾಚರಣೆಯಾಗಿದೆ. ಇಂದಿನ ಮಕ್ಕಳೇ ದೇಶದ ಮುಂದಿನ ಪ್ರಜೆಗಳು, ದೇಶದ ಪ್ರತಿ ಮಗು ಕೂಡ ವಿದ್ಯಾವಂತನಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿ ಮುಖ್ಯವಾಹಿನಿಗೆ ಬಂದರೆ ದೇಶದ ಭವಿಷ್ಯ ಉಜ್ವಲವಾಗಿರತ್ತದೆ. ಮಕ್ಕಳನ್ನು ಉತ್ತಮ ಮಾರ್ಗದಲ್ಲಿ ಬೆಳೆಸಲು ಪೋಷಕರ ಪಾತ್ರವು ಸಹ ಬಹುಮುಖ್ಯವಾಗಿರುತ್ತದೆ. ಲಾಲನೆ-ಪಾಲನೆಯಲ್ಲಿ ಯಾವುದೇ ಕೊರತೆಯಾಗಬಾರದು. ಮಕ್ಕಳಿಗೆ ಉತ್ತಮ ಅರ್ಹತೆ ಬರುವ ನಿಟ್ಟಿನಲ್ಲಿ ಹಿರಿಯರು ಶ್ರಮವಹಿಸಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ವ್ಯವಸ್ಥಾಪಕ ಸಿದ್ಧೆಗೌಡ, ಎ.ಈ. ನಾಗೇಂದ್ರ, ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ ಮತ್ತಿತರರು ಇದ್ದರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ