ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ, ದಸರೆಗೆ ಭರ್ಜರಿ ತಾಲೀಮು ನಡೆಯುತ್ತಿದೆ. ಇದರ ನಡುವೆ ದಸರೆಗೆ ಕಾಡಿನಿಂದ ನಾಡಿಗೆ ಆಗಮಿಸಿದ್ದ ಲಕ್ಷ್ಮಿ ಎಂಬ ಆನೆ ಸೆ.13ರಂದು ಅರಮನೆ ಕೋಡಿ ಸೋಮೇಶ್ವರ ದೇಗುಲದ ಬಳಿ ಗಂಡು ಮರಿಗೆ ಜನ್ಮ ನೀಡಿದೆ.
ಲಕ್ಷ್ಮಿ ಆನೆ ಹಾಗೂ ಮರಿಯನ್ನು ಅಧಿಕಾರಿಗಳು ಪ್ರತ್ಯೇಕವಾಗಿರಿಸಿದ್ದಾರೆ. ಸುರಕ್ಷತಾ ದೃಷ್ಟಿಯಿಂದ ಅರಮನೆಯಲ್ಲೇ ಲಕ್ಷ್ಮಿ ಆನೆ ಹಾಗೂ ಮರಿಯನ್ನು ಪ್ರತ್ಯೇಕವಾದ ವ್ಯವಸ್ಥೆ ಮಾಡಿ ಇಡಲಾಗಿದೆ.
ಮಾಧ್ಯಮದವರು ಸೇರಿ ಯಾರು ಆನೆ ಹಾಗೂ ಮರಿ ಹತ್ತಿರ ಹೋಗದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮುಂದಿನ ದಿನದಲ್ಲಿ ಫೋಟೋ ವಿಡಿಯೋ ನಾವೇ ಕೊಡುವುದಾಗಿ ಡಿಸಿಎಫ್ ಡಾ ಕರಿಕಾಳನ್ ತಿಳಿಸಿದ್ದಾರೆ.