ಮೈಸೂರು: ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ವತಿಯಿಂದ ದೊಡ್ಡಕೆರೆ ಮೈದಾನದ ಆವರಣದಲ್ಲಿ ಹಮ್ಮಿಕೊಂಡಿರುವ ದಸರಾ ವಸ್ತುಪ್ರದರ್ಶನಕ್ಕೆ ಸಾರ್ವಜನಿಕರು, ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಹಿನ್ನಲೆಯಲ್ಲಿ ಸೆ.26ರಿಂದ ಆರಂಭಗೊಂಡಿರುವ ಪ್ರದರ್ಶನ ಡಿ.24ರವರೆಗೆ ವಿಸ್ತರಣೆ ಮಾಡಲಾಗಿದೆ.
ಈ ಕುರಿತಂತೆ ಮಾತನಾಡಿರುವ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ಗೌಡ ಅವರು, ನಿತ್ಯ ಸುಮಾರು 10ಸಾವಿರ ಹಾಗೂ ವಾರಾಂತ್ಯದ ದಿನಗಳಲ್ಲಿ ಮತ್ತು ಸಾರ್ವತ್ರಿಕ ರಜಾ ದಿನಗಳಲ್ಲಿ 15ಸಾವಿರದಿಂದ 20 ಸಾವಿರ ಮಂದಿ ವಸ್ತುಪ್ರದರ್ಶನ ವೀಕ್ಷಿಸಲು ಭೇಟಿ ನೀಡುತ್ತಿರುವುದು ವಿಶೇಷವಾಗಿದೆ.
ಪ್ರಾಧಿಕಾರದಲ್ಲಿರುವ ಪಿ.ಕಾಳಿಂಗರಾವ್ ರಂಗಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸಿದ್ಧ ಕಲಾವಿದರು, ಗಾಯಕರಿಂದ ಪ್ರತಿ ದಿನ ಸಂಜೆ 7ರಿಂದ ರಾತ್ರಿ 9.30ರವರೆಗೆ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.