Categories: ಮೈಸೂರು

ಮೈಸೂರು: ಬದಲಾವಣೆ ಬಯಸಿದ ರಾಜ್ಯದ ಜನತೆ- ಎಂ.ಜೆ.ಶ್ರೀಕಾಂತ್

ಮೈಸೂರು: ಡಬಲ್ ಇಂಜಿನ್ ಸರ್ಕಾರ ಡಬಲ್ ಇಂಜಿನ್ ಇದ್ದರೆ ಮಾತ್ರ. ಆದರೆ, ಕರ್ನಾಟಕದ ಅಭಿವೃದ್ಧಿಯಲ್ಲಿ ರಾಜ್ಯದ ಇಂಜಿನ್ ಕೆಲಸ ಮಾಡಿಲ್ಲ. ಅದನ್ನು ರಾಜ್ಯದ ಜನತೆ ತಿರಸ್ಕರಿಸಿ ಸೂಕ್ತ ಉತ್ತರ ನೀಡಿದ್ದಾರೆ ಎಂದು ಪೊಲಿಟಿಕಲ್ ಸ್ಟ್ರ್ಯಾಟಜಿಸ್ಟ್ ಎಂ.ಜೆ.ಶ್ರೀಕಾಂತ್ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಎಷ್ಟು ಬಾರಿ ಬಂದು ಅಬ್ಬರದ ಪ್ರಚಾರ ಮಾಡಿದರು ಸಹ ಕರ್ನಾಟಕ ಜನತೆ ಡಬಲ್ ಇಂಜಿನ್ ಸರ್ಕಾರ ಒಪ್ಪಿಕೊಂಡಿಲ್ಲ. ಈ ಬಾರಿಯ ಚುನಾವಣಾ ಫಲಿತಾಂಶ ಬಿಜೆಪಿಗೆ ದಕ್ಷಿಣ ಭಾರತದ 2024ರ ಸಂಸತ್ ಚುನಾವಣೆಗೆ ಎಚ್ಚರಿಕೆಯ ಗಂಟೆಯಾಗಿದೆ. ಕೇಂದ್ರ ಕಾಂಗ್ರೆಸ್ ನಾಯಕರು ಹಾಗೂ ರಾಜ್ಯ ಕಾಂಗ್ರೆಸ್ ನಾಯಕರ ಒಗ್ಗಟ್ಟಿನಲ್ಲಿ ನಡೆದ ಭಾರತ್ ಜೋಡೋ, ಕರ್ನಾಟಕ್ ಜೋಡೋ ಯಾತ್ರೆಯ ಪರಿಣಾಮದ ಫಲಶ್ರುತಿಯನ್ನು ಇಂದು ರಾಜ್ಯದ ಜನತೆ ನೀಡಿದ್ದಾರೆ.

ಈ ಬಾರಿ ನಾನು ಒಬ್ಬ ರಾಜಕೀಯ ತಂತ್ರಗಾರನಾಗಿ ಬೆಂಗಳೂರಿನ ಮಹದೇವಪುರ, ತಿಪಟೂರು ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿದ್ದ ವರುಣ ವಿಧಾನಸಭಾ ಕ್ಷೇತ್ರ ಸೇರಿದಂತೆ 3ವಾರ್ ರೂಮ್‌ಗಳ ಕೆಲಸಗಳನ್ನು ನಿರ್ವಹಿಸಿದ್ದೇನೆ. ಆ ಭಾಗದಲ್ಲಿ ಕಂಡುಬಂದ ವಿಷಯಗಳು ಬಡಜನತೆಯ ಸಮಗ್ರ ಜೀವನಕ್ಕೆ ಜನಪರ ಸ್ನೇಹಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುಬೇಕು ಎಂಬ ಆಶಯಗಳೇ ಕೇಳಿ ಬಂದಿತ್ತು.

ಬೆಲೆ ಏರಿಕೆಯಿಂದ ತತ್ತರಿಸಿರುವ ಬಡಜನತೆ ಸಮರ್ಥ ಜೀವನಕ್ಕಾಗಿ ಮಹಿಳಾ ಮತದಾರರು ಬಹು ಸಂಖ್ಯೆಯಲ್ಲಿ ಮತ ಚಲಾಯಿಸಿದ್ದು, ನೂತನ ಸರ್ಕಾರ ರಚನೆಯಲ್ಲಿ ಮಹಿಳೆಯರು ಮುಖ್ಯ ಪಾತ್ರ ವಹಿಸಿದ್ದಾರೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತ ಸಮುದಾಯದ ವಿಚಾರ ಅಥವಾ ದಿ ಕೇರಳ ಸ್ಟೋರಿ, ಭಜರಂಗದಳ ಈ ಯಾವ ವಿಚಾರಗಳು ಕೂಡ ವೋಟ್ ಬ್ಯಾಂಕ್ ಆಗೋದಿಲ್ಲ ಎಂಬುದು ಗಮನಾರ್ಹ ಅಂಶ. ಇದು ಬಿಜೆಪಿಗೆ ಒಂದು ಎಚ್ಚರಿಕೆಯ ಗಂಟೆಯಾಗಿದೆ.

ಈ ಬಾರಿ ಕರ್ನಾಟಕ ಜನತೆ ಈ ವಿಚಾರಗಳನ್ನು ಮುಖ್ಯವಾಗಿರಿಸಿಕೊಂಡು ಮತ ಚಲಾವಣೆ ಮಾಡಿಲ್ಲ. ಬಹಳ ಮುಖ್ಯವಾಗಿ ಒಕ್ಕಲಿಗ ಸಮುದಾಯದ ಮತಗಳು ಜೆಡಿಎಸ್‌ನಿಂದ ಕಾಂಗ್ರೆಸ್ ಪಕ್ಷದತ್ತ ಹೆಚ್ಚು ಮುಖ ಮಾಡಿದ್ದು, ಬಿಜೆಪಿಯತ್ತ ಕಡಿಮೆ ವಾಲುತ್ತಿವೆ. ಹಿಮಾಚಲ ಪ್ರದೇಶದಲ್ಲಿ ಪ್ರಿಯಾಂಕ ಗಾಂಧಿಯವರು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದರು. ಪಿಂಚಣಿದಾರರ ವಿಚಾರಗಳನ್ನು ಒಳಗೊಂಡಂತೆ ಹಲವಾರು ಯೋಜನೆಗಳನ್ನು ಘೋಷಣೆ ಮಾಡಿದ್ದು, ಅದರಂತೆ ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಘೋಷಣೆ ಮಾಡಿದ್ದು. ಕರ್ನಾಟಕ ಜನತೆ ಗ್ಯಾರಂಟಿ ಯೋಜನೆಗಳನ್ನು ಪರಿಗಣಿಸಿ ನಂಬಿಕೆಯಿಂದ ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳೆಲ್ಲವೂ ಕಾಂಗ್ರೆಸ್‌ನತ್ತ ಮುಖ ಮಾಡಿವೆ.

ನನ್ನ ಗಮನಕ್ಕೆ ಬಹುವಾಗಿ ಕಾಣಿಸಿದ್ದು ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಚುನಾವಣಾ ಪ್ರಚಾರದ ರೀತಿ ನೀತಿ. ಗ್ಯಾರಂಟಿ ಕಾರ್ಡ್‌ಗಳ ಮಾಹಿತಿ ಇಲ್ಲದಿರುದುವು ಜತೆಗೆ ಹೊಂದಾಣಿಕೆಯ ಪ್ರಚಾರ ಈ ವಿಚಾರಗಳ ಮೇಲೆ ನಾನು ಕೆಲಸ ಮಾಡಿದ್ದು ಸಾಧ್ಯವಾದಷ್ಟು ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿದ್ದೇನೆ ಎಂದು ಹೇಳಿದ್ದಾರೆ.

ಬಿಜೆಪಿ ಆಪರೇಷನ್ ಕಮಲದ ರೀತಿಯ ಯಾವ ಯೋಜನೆಗಳಿಗೆ ಮಣೆ ಹಾಕದೆ ಕರ್ನಾಟಕ ಜನತೆಯ ತೀರ್ಪನ್ನು ಗೌರವಿಸಿ ಬಿಜೆಪಿ ವಿರೋಧ ಪಕ್ಷವನ್ನು ಅಲಂಕರಿಸುವುದು ಸೂಕ್ತ. ಕರ್ನಾಟಕ ರಾಜ್ಯದ ರಾಜಕೀಯ ಚಿತ್ರಣ ಬಹಳ ಹಿಂದಿನಿಂದಲೂ ಕೇಂದ್ರದಲ್ಲಿ ಅಧಿಕಾರವಿರುವ ಪಕ್ಷ ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವುದಿಲ್ಲ ಎಂಬ ಮಾತಿನಂತೆ ರಾಜ್ಯದಲ್ಲಿ ಈ ಬಾರಿಯೂ ಅದೇ ಪರಿಸ್ಥಿತಿ ಮರುಕಳಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Gayathri SG

Recent Posts

ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದ ಮಗು: ವಿಡಿಯೋ ವೈರಲ್‌

ತಮಿಳುನಾಡಿನ ಚೆನ್ನೈನ ಅವಡಿಯ ತಿರುಮಲ್ಲೈವೋವಲ್‌ನಲ್ಲಿರುವ  ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ಏಳು ತಿಂಗಳ ಮಗುವೊಂದು ವಿಂಡೋ ಪೋರ್ಚ್‌  ಮೇಲೆ ಬಿದ್ದ ಘಟನೆ ನಡೆದಿದೆ. 

14 mins ago

ಸೋನಾಮಾರ್ಗ್‌ನಲ್ಲಿ ಸ್ಕಿಡ್​ ಆಗಿ ನದಿಗೆ ಉರುಳಿದ ಕಾರು: 4 ಜನರ ಸಾವು

ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್‌ನಲ್ಲಿ  ಒಂಭತ್ತು ಜನ ಪ್ರಯಾಣ ಮಾಡುತ್ತಿದ್ದ ಟವೇರಾ ಎಸ್‌ಯುವಿ ಕಾರ್ ನಿಯಂತ್ರಣ ತಪ್ಪಿ  ಸಿಂಧ್ ನದಿಗೆ…

39 mins ago

ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ: ಆರು ಜನರ ದುರ್ಮರಣ

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಸಫಿಪುರದಲ್ಲಿ ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ  ನಡೆದಿದೆ.

1 hour ago

ಮತ್ತೊಂದು ಲವ್ ಜಿಹಾದ್ ಪ್ರಕರಣ: ಬಾಲಕಿಯನ್ನು ಪುಸಲಾಯಿಸಿ ಕರೆತಂದ ಯುವಕ

ಹುಬ್ಬಳ್ಳಿಯಲ್ಲಿ  ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಫುಸಲಾಯಿಸಿ ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಕರೆದುಕೊಂಡ ಬಂದಿದ್ದಾನೆ.

2 hours ago

ವಕೀಲರ ಸಂಘದ ಅಧ್ಯಕ್ಷರಾಗಿ ಶಿವಶರಣಪ್ಪ ಪಾಟೀಲ ಆಯ್ಕೆ

2024-25ನೇ ಸಾಲಿಗೆ ನಡೆದ ಜಿಲ್ಲಾ ವಕೀಲರ ಸಂಘದ ಚುನಾವಣೆಯಲ್ಲಿ ಶಿವಶರಣಪ್ಪ ಪಾಟೀಲ ಗೆದ್ದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

2 hours ago

ಈ ವಾರವೂ ಅನಿಶ್ಚಿತ ಸ್ಥಿತಿಯಲ್ಲಿ ಚಿನ್ನದ ಬೆಲೆ: ಇವತ್ತಿನ ದರ ಪಟ್ಟಿ ಹೀಗಿದೆ

ಸತತವಾಗಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು  ಕಳೆದ ವಾರ ಮಿಶ್ರ ಅನುಭವ ನೀಡಿವೆ. ಒಂದು ವಾರದಲ್ಲಿ ಚಿನ್ನದ…

2 hours ago