News Karnataka Kannada
Sunday, April 28 2024
ಮೈಸೂರು

ಮೈಸೂರು: ನಕಲಿ ರಸಗೊಬ್ಬರ ತಯಾರಿಕೆ ಜಾಲ ಪತ್ತೆ

Mysuru: A fake fertilizer manufacturing racket has been busted
Photo Credit : By Author

ಮೈಸೂರು: ನಕಲಿ ರಸಗೊಬ್ಬರ ತಯಾರಿಸುತ್ತಿದ್ದ ಘಟಕದ ಮೇಲೆ ದಾಳಿ ನಡೆಸಿರುವ ಪೊಲೀಸರು ನಕಲಿ ರಸಗೊಬ್ಬರ  ಮೂಟೆಗಳು, ರಸ ಗೊಬ್ಬರ ತಯಾರಿಕೆ ಬಳಸುತ್ತಿದ್ದ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ಡಾ.ಬಿ.ಎಸ್.ಚಂದ್ರಶೇಖರ್ ನೇತೃತ್ವದ ಕೃಷಿ ಇಲಾಖೆಯ ಅಧಿಕಾರಿಗಳ ತಂಡ ಪೊಲೀಸರ ಸಹಕಾರದೊಂದಿಗೆ ತಾಲೂಕಿನ ಮಂಡಕಳ್ಳಿ ಗ್ರಾಮದ ಹಳೆ ಕೋಳಿ ಫಾರಂನಲ್ಲಿ ನಕಲಿ ರಸಗೊಬ್ಬರದ  ಗೋದಾಮಿನ ಮೇಲೆ ದಾಳಿ ನಡೆಸಿ ನಕಲಿ ರಸಗೊಬ್ಬರ ತಯಾರಿಕಾ ಯಂತ್ರ, ಚೀಲ ಹೊಲೆಯುವ ಯಂತ್ರ, ಜೆಡಿ, ಕೆಂಪು ಮಣ್ಣು, ಬಣ್ಣ ಲೇಪನ ಮಾಡಲು ಉಪಯೋಗಿಸುವ ರೆಡ್ ಆಕ್ಸೈಡ್, ಕಳಪೆ ರಸಗೊಬ್ಬರದ ಚೀಲಗಳು ಹಾಗೂ ಬ್ರಾಂಡೆಡ್ ಕಂಪನಿಯನ್ನು ಹೋಲುವ ಖಾಲಿ ಚೀಲಗಳನ್ನು ವಶ ಪಡಿಸಿಕೊಂಡಿದ್ದಾರೆ.

ಮಂಡಕಳ್ಳಿ ಗ್ರಾಮದ ಹೆಬ್ಬಾಳೇಗೌಡ ಅವರ ಜಮೀನಿನಲ್ಲಿರುವ ಹಳೆ ಕೋಳಿಫಾರಂ ಅನ್ನು ಮೈಸೂರು ಮೂಲದ ಮಹೇಶ  ಎಂಬುವವರು ಸಾವಯವ ಗೊಬ್ಬರ ತಯಾರಿಕಾ ಘಟಕ ನಡೆಸಲು ಬೋಗ್ಯಕ್ಕೆ ಪಡೆದಿದ್ದ. ಕಳೆದ ಒಂದು ತಿಂಗಳಿಂದ ನಕಲಿ ಗೊಬ್ಬರ ತಯಾರಿಕೆ ಮಾಡಿ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈ ಬಗ್ಗೆ ಸ್ಥಳೀಯ ಗ್ರಾಮಸ್ಥರು ಅನುಮಾನಗೊಂಡು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಮೇರೆಗೆ ಕೃಷಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ಸಂಬಂಧ ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಉಪ ಕೃಷಿ ನಿರ್ದೇಶಕ ಡಾ.ಕೆ.ರಾಜು, ಸಹಾಯಕ ಕೃಷಿ ನಿರ್ದೇಶಕ ಡಾ.ಎಚ್.ಬಿ.ಮಧುಲತಾ, ಕೃಷಿ ಅಧಿಕಾರಿಗಳಾದ ಡಾ.ಪಿ.ಎನ್ ಜೀವನ್,  ಡಾ.ಕಾರ್ತಿಕ್.ಸಿ.ಎಂ, ಮೈಸೂರು ದಕ್ಷಿಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಶಿಕುಮಾರ್, ಎಸ್‌ಐ  ಕೆಂಪಣ್ಣ, ಪೊಲೀಸ್ ಸಿಬ್ಬಂದಿ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು