News Karnataka Kannada
Saturday, April 27 2024
ಮೈಸೂರು

ಮೈಸೂರು: ಆನ್‌ಲೈನ್‌ ಟಿಕೆಟ್‌ ವ್ಯವಸ್ಥೆ ರದ್ದಿಗೆ ಮನವಿ

Mysore/Mysuru: A plea has been made to scrap the online ticketing system.
Photo Credit :

ಮೈಸೂರು: ತಿ.ನರಸೀಪುರ ತಾಲೂಕಿನ ಸೋಮನಾಥಪುರ  ಮತ್ತು ಶ್ರೀರಂಗಪಟ್ಟಣದಲ್ಲಿ  ಆನ್‌ಲೈನ್‌ ಟಿಕೆಟ್‌ ವ್ಯವಸ್ಥೆಯನ್ನು ಮಾಡಿದ್ದು ಅದನ್ನು ರದ್ದುಗೊಳಿಸಿ ಆಫ್‌ಲೈನ್‌ ಟಿಕೆಟ್‌ ನೀಡುವಂತೆ ಪ್ರವಾಸೋದ್ಯಮ ಸಚಿವರು ಹಾಗೂ ಪುರಾತತ್ವ ಇಲಾಖೆಗೆ ಮೈಸೂರು ಟ್ರಾವಲ್ಸ್‌ ಅಸೋಸಿಯೇಷನ್‌ ಪತ್ರ ಬರೆದಿದೆ.

ಮೈಸೂರಿನ ತಿ.ನರಸೀಪುರದಲ್ಲಿರುವ ಸೋಮನಾಥಪುರ ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಕೋಟೆಗಳೆರಡೂ  ಐತಿಹಾಸಿಕ ಪ್ರಾಮುಖ್ಯತೆ ಹೊಂದಿರುವ  ಭಾರತೀಯ ಪುರಾತತ್ವ ಇಲಾಖೆಗೆ ಸೇರಿದ ಪ್ರವಾಸಿ ತಾಣಗಳಾಗಿದ್ದು, ಇಲ್ಲಿಗೆ ಪ್ರತಿದಿನ ನೂರಾರು ಪ್ರವಾಸಿಗರು ಬರುತ್ತಿರುತ್ತಾರೆ. ಈ ಪೈಕಿ ನಗರ ಭಾಗದವರು, ಹಳ್ಳಿಗಳಿಂದ ಬರುವವರು..ಹೀಗೆ ಎಲ್ಲರೂ ಇರುತ್ತಾರೆ. ಕೆಲವರಿಗೆ ಆನ್‌ಲೈನ್‌ನಲ್ಲಿ ಟಿಕೆಟ್‌ ಕೊಳ್ಳುವುದು ಹೇಗೆಂದು ತಿಳಿದಿರುವುದಿಲ್ಲ. ಪ್ರವಾಸಿಗರಿಗೆ ಸಹಾಯ ಮಾಡಲು ಅಲ್ಲಿ ಸಿಬ್ಬಂದಿ ಇರುತ್ತಾರಾದರೂ ಅವರು ಹೇಳಿದ್ದೆಲ್ಲವನ್ನೂ ಅರ್ಥ ಮಾಡಿಕೊಂಡು ಅಂತೆಯೇ ಟಿಕೆಟ್‌ ಕೊಳ್ಳಲು ಬರುವುದಿಲ್ಲ.

ಇದರಿಂದಾಗಿ ಎಷ್ಟೋ ಸ್ಥಳೀಯ ಪ್ರವಾಸಿಗರು ನಿರಾಶರಾಗಿ ಹಿಂದಿರುಗುತ್ತಿರುವ ನಿದರ್ಶನಗಳೂ ಇವೆ. ಆದ್ದರಿಂದ ಇಲಾಖೆ ಈ  ಬಗ್ಗೆ ಗಮನಹರಿಸಿ ಈ ಸ್ಥಳಗಳಲ್ಲಿ ಆನ್‌ಲೈನ್ ಬದಲು ಮಾಮೂಲಿನಂತೆ ಟಿಕೆಟ್‌ ನೀಡುವ ವ್ಯವಸ್ಥೆ ಮಾಡಬೇಕು. ಹಾಗೆ ಮಾಡಿದಾಗ ಮಾತ್ರ ಇನ್ನಷ್ಟು ಪ್ರವಾಸಿಗರು ಆಗಮಿಸಲು ಸಾಧ್ಯ. ಇದನ್ನು ಗಮನದಲ್ಲಿರಿಸಿಕೊಂಡು ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು