Categories: ಮೈಸೂರು

ಮೈಸೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ

ಮೈಸೂರು: ಮೈಸೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮುಂದುವರೆದಿದ್ದು, ನಗರದ ಭುಗತಹಳ್ಳಿ ಹೊರವಲಯದ ವೆಂಕಟಗಿರಿ ಬಡಾವಣೆಯ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದುದನ್ನು ಪತ್ತೆಹಚ್ಚಿ  ಯುವತಿಯನ್ನು ರಕ್ಷಿಸಿದ್ದು, ಆರೋಪಿ ಪರಾರಿಯಾಗಿದ್ದಾನೆ.

ಅಭಿ ಎಂಬಾತನೇ ಯುವತಿಯನ್ನು ಇಟ್ಟುಕೊಂಡು ವೇಶ್ಯಾವೃತಿ ನಡೆಸುತ್ತಿದ್ದ ವ್ಯಕ್ತಿಯಾಗಿದ್ದು, ಈತನ ವಿರುದ್ಧ ಮೈಸೂರು ಮಹಿಳಾ ಪೊಲೀಸ್ ಠಾಣೆ ಮೊ.ನಂ.55/2022 ಕಲಾಂ 3,4,5,6,7, ಐ.ಟಿ.ಪಿ ಆಕ್ಟ್ ರೀತ್ಯಾ ಪ್ರಕರಣ ದಾಖಲಾಗಿದೆ. ಈತ ಮನೆಯಲ್ಲಿಯೇ ಯುವತಿಯನ್ನು ಇಟ್ಟುಕೊಂಡು ಮನೆಗೆ ಗ್ರಾಹಕರನ್ನು ಕರೆಯಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದನು. ಈ ಬಗ್ಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಪೊಲೀಸರು ಮಹಜರು ಪಂಚಾಯ್ತುದಾರರಾಗಿ ಕರುನಾಡ ರಕ್ಷಣಾ ವೇದಿಕೆ ಸದ್ಯಸರಾದ ಬಸವರಾಜು, ಸದಸ್ಯರಾದ ಸಂಜಯ್ ಅವರೊಂದಿಗೆ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ ಮಾಡಿ ಸ್ಥಳದಲ್ಲಿದ್ದ ಇಬ್ಬರು ಗ್ರಾಹಕರಾದ ಶ್ರೀಧರ್ ರೆಡ್ಡಿ, ಸಂದೀಪ್ ಮತ್ತು ಒಬ್ಬ ಸಂತ್ರಸ್ಥ ಯುವತಿಯನ್ನು ರಕ್ಷಿಸಿದ್ದು ಈ ವೇಳೆ ಅರೋಪಿ ಅಭಿ ಪರಾರಿಯಾಗಿದ್ದಾನೆ.

ಮೈಸೂರು ಗ್ರಾಮಾಂತರ ವಿಭಾಗದ ಪೊಲೀಸ್ ಉಪ ಅಧೀಕ್ಷಕರಾದ ಎಂ.ಎಸ್. ಪೂರ್ಣಚಂದ್ರ ತೇಜಸ್ವಿ ಅವರ ಮಾರ್ಗದರ್ಶನದಲ್ಲಿ ಮಹಿಳಾ ಠಾಣಾ ನಿರೀಕ್ಷಕರಾದ ಮಮತಾ ಮತ್ತು ಸಿಬ್ಬಂದಿ ರಾಮ್ ಪ್ರಸಾದ್, ಸುನೀಲ್, ಹರೀಶ್ ಕುಮಾರ್, ದ್ರಾಕ್ಷಾಯಿಣಿ, ಚಾಲಕರಾದ ಚಿಕ್ಕಲಿಂಗಯ್ಯ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Ashika S

Recent Posts

ಡಿಕೆಶಿ ವಿರುದ್ಧ ಜೆಡಿಎಸ್‌-ಬಿಜೆಪಿ ಬೃಹತ್‌ ಪ್ರತಿಭಟನೆ

ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರದಲ್ಲಿ ಬುಧವಾರ ಡಿಸಿಎಂ ಡಿ.ಕೆಶಿವಕುಮಾರ್‌ ಬೃಹತ್‌ ಪ್ರತಿಭಟನೆ ನಡೆಸಲಾಗಿದೆ. ರಾಮನಗರದ ಐಜೂರು…

3 mins ago

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಮದುವೆ ದಿನಾಂಕ ಫಿಕ್ಸ್

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಹಸೆಮಣೆ ಏರಲು ರೆಡಿಯಾಗಿದ್ದಾರೆ. ತಮಿಳಿನ ಖ್ಯಾತ ನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ…

17 mins ago

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಹತ್ಯೆ

ಇಲ್ಲಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

19 mins ago

ಮೆಕ್ಯಾನಿಕ್‌ಗಳ ಬಗ್ಗೆ ಅವಹೇಳ ಹೇಳಿಕೆ : ಝೀ ವಾಹಿನಿ ವಿರುದ್ಧ ಗ್ಯಾರೇಜ್‌ ಮಾಲಿಕರ ಸಂಘ ಆಕ್ರೋಶ

ಇತ್ತೀಚೆಗಷ್ಟೆ ಝೀ ವಾಹಿಯಲ್ಲಿ ಪ್ರಸಾರವಾಗುವ ಮಹಾನಟಿ ಕಾರ್ಯಕ್ರಮದಲ್ಲಿ ಮೆಕ್ಯಾನಿಕ್‌ಗಳ ಬಗ್ಗೆ ಹೇಳಿಕೆ ನೀಡಲಾಗಿತ್ತು ಹಾಗೂ ತೀರ್ಪುಗಾರರ ವಿರುದ್ಧ ಕೇಸ್‌ ಕೂಡ…

29 mins ago

ನನ್ನ ಹೆಸರು ಹೇಳದಿದ್ದರೆ ಕುಮಾರಸ್ವಾಮಿಗೆ ನಿದ್ದೆನೇ ಇಲ್ಲ ಎಂದ ಡಿಕೆ ಶಿವಕುಮಾರ್‌

ನನ್ನ ಹೆಸರು ಹೇಳದಿದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಮಾಜಿ ಸಿಎಂ ಹೆಚ್‌ಡಿಕೆ ತಿರುಗೇಟು ನೀಡಿದ್ದಾರೆ.

35 mins ago

ಕುಟುಂಬಸ್ಥರೊಂದಿಗೆ ಈಜು ಕಲಿಯಲು ಹೋದ ಬಾಲಕ ನೀರುಪಾಲು

ಈಜು ಕಲಿಯಲು ಹೋದ ಬಾಲಕ ನೀರುಪಾಲಾಗಿರುವ ಘಟನೆ ರಾಯಚೂರು ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ.

50 mins ago