Categories: ಮೈಸೂರು

ಮೈಸೂರು: ದಸರಾ ಆರಂಭಕ್ಕೂ ಮುನ್ನವೇ ಮೈಸೂರಿನಲ್ಲಿ ಮತ್ತೆ ಶುರುವಾಯ್ತು ಸರಗಳ್ಳರ ಹಾವಳಿ

ಮೈಸೂರು: ದಸರಾ ಆರಂಭಕ್ಕೂ ಮುನ್ನವೇ ಮೈಸೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಕ ಕಾಲದಲ್ಲಿ  ಸರಣಿ ಸರಗಳ್ಳತನವಾಗಿದ್ದು ಸರಗಳ್ಳರ ಕೃತ್ಯದಿಂದ ಮೈಸೂರು ನಗರದ ಜನತೆ ಭಯಪಡುವಂತಾಗಿದೆ.

ಕೇವಲ ಎರಡುವರೆ ಗಂಟೆ  ಅವಧಿಯಲ್ಲಿ  ಮೂರು ಕಡೆ ಸರಗಳ್ಳತನ ನಡೆಸಿ, ಒಂದು ಕಡೆ ವಿಫಲ ಯತ್ನ ನಡೆಸಿರುವ ಘಟನೆ ನಡೆದಿದ್ದು, ಹೀಗಾದರೆ ಹೇಗಪ್ಪಾ ಎಂಬ ಚಿಂತೆ ಜನತೆಯನ್ನು ಆವರಿಸಿದೆ. ಪೊಲೀಸರು ಕಾರ್ಯಾಚರಣೆ ನಡೆಸಿ ಸರಗಳ್ಳರನ್ನು ಬಂಧಿಸಿದ್ದರೂ ಹೊಸ ಕಳ್ಳರು ಹುಟ್ಟಿಕೊಳ್ಳುತ್ತಿರುವುದು ಕಂಡು ಬರುತ್ತಿದೆ. ಇದೀಗ ರಾತ್ರಿ ಸಮಯದಲ್ಲಿ ಸರಗಳ್ಳರು ತಮ್ಮ ಕೈಚಳಕ ಆರಂಭಿಸಿದ್ದಾರೆ.

ಸ್ಕೂಟರ್ ನಲ್ಲಿ ಬಂದ ಇಬ್ಬರು ಖದೀಮರು ನಾಯ್ಡು ನಗರದ ಮುಖ್ಯ ರಸ್ತೆಯ ಫುಡ್ ಸ್ಟ್ರೀಟ್ ವೃದ್ದೆ ಗಿರಿಜಮ್ಮ(72) ಅವರು ಸಂಜೆ 7 ಗಂಟೆ ಸಮಯದಲ್ಲಿ   ಗೋಬಿ ತಿನ್ನುವಾಗ 30 ಗ್ರಾಂ ಚಿನ್ನ ಸರವನ್ನು ಕಸಿದು ಪರಾರಿಯಾಗಿದ್ದಾರೆ. ಸ್ಕೂಟರ್  ಹಿಂಬದಿ ಸವಾರ ಸರ ಕಸಿದು ಪರಾರಿಯಾಗಿದ್ದಾರೆ. ಈ ಸಂಬಂಧ ಎನ್. ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿವಿ ಮೊಹಲ್ಲಾದ 8 ನೇ ಕ್ರಾಸ್ ನಲ್ಲಿ ಗೋಕುಲಂ ನಿವಾಸಿ ಸುಜಾತ (55)  ಎಂಬವರ ಸರ ಕಸಿದು ಪರಾರಿಯಾಗಿದ್ದಾರೆ. ರಾತ್ರಿ 9 ಗಂಟೆ ಸಮಯದಲ್ಲಿ ಅಂಗಡಿಯಿಂದ ಸಾಮಾನುಗಳನ್ನು ಕೊಂಡು ಹಿಂತಿರುಗುವಾಗ ಬೈಕಿನಲ್ಲಿ ಬಂದ ಖದೀಮರು ಇವರ 20 ಗ್ರಾಂ ಸರವನ್ನು ಕಸಿದು ಪರಾರಿಯಾಗಿದ್ದಾರೆ. ಈ ಸಂಬಂಧ ವಿವಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಕೂಟರ್‌ನಲ್ಲಿ ಬಂದ ಸರಗಳ್ಳರು ಮಹಿಳೆಯ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ. ಸರಸ್ವತಿಪುರಂ ಮೂರನೇ ಮೇನ್ ನಿವಾಸಿ ಮಾಲತಿ (38) ಸರ ಕಳೆದುಕೊಂಡವರು. ಸರಸ್ವತಿಪುರಂನಲ್ಲಿ ರಾತ್ರಿ 9.30 ರ ಸಮಯದಲ್ಲಿ ಈ ಘಟನೆ ನಡೆದಿದೆ. ಮೊಪೆಡ್‌ನಲ್ಲಿ ಬಂದ ಖದೀಮರು ಮಾಲತಿ ಅವರ 35 ಗ್ರಾಂ ತೂಕದ ಚಿನ್ನದ ಕಸಿದು ಪರಾರಿಯಾಗಿದ್ದಾರೆ. ಈ ಸಂಬಂಧ ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇದೆಲ್ಲದರ ನಡುವೆ ವಿಜಯನಗರದ ಎರಡನೇ ಹಂತದಲ್ಲಿ ರಾತ್ರಿ 8.30ರ ಸಮಯದಲ್ಲಿ ವನಮಾಲ ಎಂಬವರ ಸರಗಳವಿಗೆ ಬೈಕಿನಲ್ಲಿ ಬಂದ ಸರಗಳ್ಳರು ವಿಫಲ ಯತ್ನ ನಡೆಸಿದ್ದಾರೆ.

ಮಹಿಳೆ ಸರವನ್ನು ಗಟ್ಟಿಯಾಗಿ ಹಿಡಿದುಕೊಂಡು ಸಹಾಯಕ್ಕೆ ಕೂಗಿದಾಗ ಗಾಬರಿಕೊಂಡ ಖದೀಮರು ಪರಾರಿಯಾಗಿದ್ದಾರೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ. ದಸರಾ ಬರುತ್ತಿದ್ದಂತೆಯೇ ಸರಗಳ್ಳರು ಮೈಸೂರಿನತ್ತ ಮುಖ ಮಾಡಿರುವುದರಿಂದ ಚಿನ್ನಾಭರಣ ಧರಿಸಿ ಓಡಾಡುವ ಮಹಿಳೆಯರು ಎಚ್ಚರವಾಗಿರುವುದು ಒಳಿತು.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

1 hour ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

2 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

2 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

3 hours ago