News Karnataka Kannada
Monday, May 20 2024
ಮೈಸೂರು

ಮೈಸೂರು: ಜೆಡಿಎಸ್ ತೊರೆದು ಬಿಜೆಪಿ ಸೇರಿದ ಅಜಯ್ ಶಾಸ್ತ್ರಿ

Mysuru: Ajay Shastri quits JD(S) to join BJP
Photo Credit : By Author

ಮೈಸೂರು: ಚುನಾವಣಾ ಕಣ ರಂಗೇರುತ್ತಿದ್ದಂತೆಯೇ ಪಕ್ಷಾಂತರ ಪರ್ವಗಳು ಜೋರಾಗಿ ನಡೆಯುತ್ತಿವೆ. ಇದುವರೆಗೆ ಗುರುತಿಸಿಕೊಂಡಿದ್ದ ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಸೇರ್ಪಡೆಯಾಗುವುದು ಅಲ್ಲಲ್ಲಿ ನಡೆಯುತ್ತಲೇ ಇದ್ದು ಇದೀಗ ನಗರದ ಕೃಷ್ಣರಾಜ ಕ್ಷೇತ್ರದ ಯುವ ಮುಖಂಡ ಅಜಯ್ ಶಾಸ್ತ್ರಿ ಜೆಡಿಎಸ್ ತೊರೆದು ಬಿಜೆಪಿ ಸೇಪರ್ಡೆಯಾಗಿದ್ದು, ಅವರೊಂದಿಗೆ 50ಕ್ಕೂ ಹೆಚ್ಚು ಮಂದಿ ಬೆಂಬಲಿಗರು ಕಮಲ ಹಿಡಿದಿದ್ದಾರೆ.

ಭಾರತೀಯ ಜನತಾ ಪಾರ್ಟಿ ಕಛೇರಿಯಲ್ಲಿ ಶಂಕರ ರಾಮಾನುಜ ಜಯಂತಿ ಆಚರಣೆ ಸಂದರ್ಭದಲ್ಲಿ ಬಿಜೆಪಿ ಮೈಸೂರು ವಿಭಾಗ ಪ್ರಭಾರಿ ಮೈವಿ.ರವಿಶಂಕರ್  ನೇತೃತ್ವದಲ್ಲಿ ಕೃಷ್ಣರಾಜ ಕ್ಷೇತ್ರದ ಯುವ ಮುಖಂಡ ಅಜಯ್ ಶಾಸ್ತ್ರಿ ಜೆಡಿಎಸ್ ತೊರೆದು ಬಿಜೆಪಿ ಸೇಪರ್ಡೆಯಾದರು ಅವರೊಂದಿಗೆ 50ಕ್ಕೂ ಹೆಚ್ಚು ಮಂದಿ ಸೇಪರ್ಡೆಯಾದರು.

ಇದೇ ಸಂಧರ್ಭದಲ್ಲಿ ಬಿಜೆಪಿ ಪ್ರಭಾರಿ ಮೈವಿ.ರವಿಶಂಕರ್ ರವರು ಆಚಾರ್ಯತ್ರಯರ ಭಾವಚಿತ್ರಕ್ಕೆ ಪುಷ್ಪನಮನ ಮಾಡಿ ಮಾತನಾಡಿ ಸನಾತನ ಹಿಂದೂ ಧರ್ಮದ ಉಳಿವಿಗೆ ಇಡೀ ಭಾರತವನ್ನೇ ಕಾಲ್ನಡಿಗೆಯಲ್ಲಿ ಪರ್ಯಟನೆ ಮಾಡಿ 8ನೇ ಶತಮನಾದಲ್ಲೇ ಹಿಂದೂಧರ್ಮಕ್ಕೆ ಭದ್ರಬುನಾದಿ ಹಾಕಿಕೊಟ್ಟ ಆದಿ ಶಂಕರಾಚಾರ್ಯರು ಮತ್ತು ಸಮಾನತೆ ಸಂದೇಶ ಸಾರಿದ ರಾಮಾನುಜಾಚಾರ್ಯರು ಮತ್ತು ಕರ್ನಾಟಕದವರೇ ಆದ ಮಧ್ವಾಚಾರ್ಯರು ಆದರ್ಶ ತತ್ವಗಳನ್ನ ಪಾಲಿಸುವಲ್ಲಿ ಯುವಜನಾಂಗ ಮುಂದಾಗಬೇಕು ಸಮಾಜ ಕಟ್ಟುವಲ್ಲಿ ಯುವಕರ ಪಾತ್ರ ಮಹತ್ವವಾದುದು ಎಂದರು.

ಇದೇ ಸಂಧರ್ಭದಲ್ಲಿ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿಟಿ. ಪ್ರಕಾಶ್, ಬಿಜೆಪಿ ಕಾರ್ಯಾಧ್ಯಕ್ಷ ಹೆಚ್.ಜಿ ಗಿರಿಧರ್, ಮಾಧ್ಯಮ ವಕ್ತಾರ ಮೋಹನ್, ನಗರಪಾಲಿಕೆ ಸದಸ್ಯ ಮಾವಿ‌ ರಾಂಪ್ರಸಾದ್, ಪ್ರಮೀಳಾ ಭರತ್, ಮಾಜಿ ನಗರಪಾಲಿಕೆ ಸದಸ್ಯೆ ಸೌಭಾಗ್ಯಮೂರ್ತಿ, ಬಿಜೆಪಿ ಹಿಂದುಳಿದ ವರ್ಗದ ಅಧ್ಯಕ್ಷ ಜೋಗಿ ಮಂಜು, ಬಿಜೆಪಿ ಯುವ ಮೋರ್ಛಾ ನಗರ ಉಪಾಧ್ಯಕ್ಷ ಕೆ.ಎಂ ನಿಶಾಂತ್ ಸೇರಿದಂತೆ ಇನ್ನಿತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು