News Karnataka Kannada
Monday, April 29 2024
ಮೈಸೂರು

ಮೈಸೂರು: ಅಕ್ಷರ ಲಕ್ಷ ಗಾಯತ್ರಿ ಯಜ್ಞ ಸಂಪನ್ನ

Akshara Laksha Gayatri Yajna Sampanna
Photo Credit : By Author

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಶ್ರೀ ಸ್ವರ್ಣ ನರಸಿಂಹ ದತ್ತ ಪೀಠಿಕಾ ಸೇವಾ ಟ್ರಸ್ಟ್ ವತಿಯಿಂದ ಮೈಸೂರು ನಗರದ ಖಿಲ್ಲೆ ಮೊಹಲ್ಲಾದ ಶಂಕರ ಮಠದಲ್ಲಿ ಅಕ್ಷರ ಲಕ್ಷ ಗಾಯತ್ರಿ ಯಜ್ಞವು ಮೂರು ದಿನಗಳ ಯಶಸ್ವಿಯಾಗಿ ನಡೆದು ಸಂಪನ್ನಗೊಂಡಿತು.

ಪರಮಪೂಜ್ಯ ಶ್ರೀ ಅರ್ಜುನ ಅವಧೂತ ಮಹಾರಾಜರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಷದ ಕೊನೆಯ ತಿಂಗಳು ಡಿಸೆಂಬರ್ ನಲ್ಲಿ ಯಾವುದೇ ಅನಾಹುತ ಸಂಭವಿಸಿದಂತೆ ಮತ್ತು ಮುಂಬರುವ ಹೊಸ ವರ್ಷ ಸರ್ವರಿಗೂ ಒಳಿತು ಮಾಡಿ ನಾಡು ಸುಬಿಕ್ಷೆಯಾಗಿರಲಿ ಎಂದು ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸಿ ಯತಿಗಳು ಹೋಮ-ಹವನ ನಡೆಸಿದರು.

ಮೂರು ದಿನಗಳ ಈ ಯಜ್ಞದಲ್ಲಿ ಒಟ್ಟು 24 ಕಳಸಗಳನ್ನು ಸ್ಥಾಪಿಸಿ, ಐದು ಹೋಮ ಕುಂಡಗಳನ್ನು ನಿರ್ಮಿಸಿ ಪ್ರತಿ ಹೋಮ ಕುಂಡದಲ್ಲಿ 11 ಯತಿಗಳು ಪಾಲ್ಗೊಂಡು ಜಪ ಮತ್ತು ಮಂತ್ರಗಳ ಮೂಲಕ ಪ್ರಧಾನ ಆಚಾರ್ಯ ಶ್ರೀ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿಸಿದರು.ನಂತರ ಪರಮಪೂಜ್ಯ ಶ್ರೀ ಅರ್ಜುನ ಅವಧೂತ ಮಹಾರಾಜರು ಪೂರ್ಣಾಹುತಿ ನೆರವೇರಿಸಿದರು.

ಸಾವಿರಾರು ಭಕ್ತರು ಪಾಲ್ಗೊಂಡು ಮಹಾ ಮಂತ್ರ ಗಾಯಿತ್ರಿ ಮಂತ್ರವನ್ನು ಕೇಳಿ ಪುನಿತರಾದರು.ಪ್ರತಿ ದಿನವೂ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.ಬಹುದಿನಗಳಿಂದ ಸಂಕಲ್ಪ ಮಾಡಿದ್ದ “ಅಕ್ಷರ ಲಕ್ಷ ಗಾಯತ್ರಿ ಜಪ ಸಾಂಗತಾ ಯಜ್ಞ ಗುರುಗಳ ಆಶೀರ್ವಾದ ಮತ್ತು ಸಂಕಲ್ಪದಿಂದ ಹಾಗೂ ಎಲ್ಲರ ಸಹಕಾರದಿಂದ ನೆರವೇರಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು