Categories: ಮೈಸೂರು

ಬ್ರ್ಯಾಂಡ್ ಮೈಸೂರು ಲೋಗೋ,ಟ್ಯಾಗ್‌ಲೈನ್  ಬಿಡುಗಡೆ

ಮೈಸೂರು: ಮೈಸೂರನ್ನು ಜಾಗತಿಕ ಮಟ್ಟದಲ್ಲಿ ಬ್ರ್ಯಾಂಡಿಂಗ್ ಮಾಡುವ ಹಾಗೂ ಜಿಲ್ಲೆಯ ಪ್ರವಾಸೋದ್ಯಮ, ಕಲೆ, ಸಂಸ್ಕೃತಿ, ಪರಂಪರೆ ಬಿಂಬಿಸುವ ಉದ್ದೇಶದಿಂದ ಹೊರ ತರಲಾದ ಬ್ರ್ಯಾಂಡ್ ಮೈಸೂರು ಲೋಗೋ ಹಾಗೂ ಟ್ಯಾಗ್‌ಲೈನನ್ನು  ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅನಾವರಣಗೊಳಿಸಿದರು.

ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ  ಆಯೋಜಿಸಿದ್ದ ಲೋಗೋ ಬಿಡುಗಡೆ ಕಾರ್ಯಕ್ರಮದಲ್ಲಿ ಲೋಗೋ ಜೊತೆ ನಮ್ಮ ಪರಂಪರೆ, ನಿಮ್ಮ ತಾಣ ಎಂಬ ಅಡಿಬರಹ (ಟ್ಯಾಗ್‌ಲೈನ್) ಅನ್ನು ಹೊರತರಲಾಯಿತು.

ಈ ವೇಳೆ ಮಾತನಾಡಿದ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಮೈಸೂರು ಬ್ರ್ಯಾಂಡಿಂಗ್‌ಗಾಗಿ ಇದು ದೊಡ್ಡ ಹೆಜ್ಜೆ. ಇದರಿಂದ ಹಲವಾರು ಅನುಕೂಲತೆಗಳು ಆಗಲಿದೆ. ಅಕ್ಕಪಕ್ಕದ ಜಿ ಹಾಗೂ ರಾಜ್ಯಗಳನ್ನು ಆರ್ಕಸಿಸುವುದಕ್ಕಾಗಿ ಮಾಡುತ್ತಿಲ್ಲ. ವಿಶ್ವದ ಪ್ರವಾಸಿ ಪ್ರೇಮಿಗಳನ್ನು ಸೆಳೆಯಲು ಮುಖ್ಯ ಉದ್ದೇಶವಾಗಿದೆ. ಇತಿಹಾಸ ತಿಳಿಯಲು ಅನುಕೂಲವಾಗುತ್ತದೆ ಎಂದರು.

ಮೈಸೂರನ್ನು ಕೇವಲ ಅರಮನೆಗಳ ನಗರಿ ಎಂದೇ ನೋಡುತ್ತೇವೆ. ಆದರೆ, ಇಲ್ಲಿ ಪ್ರವಾಸಿ ಕ್ಷೇತ್ರಗಳನ್ನು ಇಲ್ಲಿ ನೋಡಬಹುದು. ಜಗತ್ತಿನಲ್ಲಿ ಹಲವಾರು ಪ್ರವಾಸಿ ಕ್ಷೇತ್ರಗಳು ಪ್ರವಾಸಿಗರನ್ನು ಆಕರ್ಷಿಸುವಂತೆ ಮಾಡುತ್ತದೆ. ಹಳೆಬೇಡು  ಬೇಲೂರಿನ ೭೨  ಸುಂದರಮೂರ್ತಿಗಳನ್ನು ಬ್ರಿಟಿಷರು ತಮ್ಮ ದೇಶದ ಮ್ಯೂಸಿಯಂನಲ್ಲಿ ಇಟ್ಟುಕೊಂಡಿzರೆ. ಇದನ್ನು ಮತ್ತೆ ರಾಜ್ಯಕ್ಕೆ ತರುವ  ಬಗ್ಗೆ ಪ್ರಮಾಣಿಕವಾಗಿ ಸರ್ಕಾರ ಪ್ರಯತ್ನ ಮಾಡಲಿದೆ ಎಂದು ಹೇಳಿದರು.

ಮೈಸೂರಿನ ಹಳೆಯ ಪಾರಂಪರಿಕ ಅಥವಾ ಹಳೆಯ ಕಟ್ಟಡಗಳನ್ನು ಸರ್ಕಾರ ಒಂದೇ ರಕ್ಷಿಸಲು ಸಾಧ್ಯವಿಲ್ಲ. ಅದರ  ರಕ್ಷಣೆಗೆ ಜನರ ಸಹಕಾರ, ಸಹಾಯ ಅಗತ್ಯವಿದೆ. ೨೫ ಸಾವಿರಕ್ಕೂ ಹೆಚ್ಚು ಸ್ಮಾರಕಗಳು ನಮ್ಮಲ್ಲಿವೆ. ಇದರಲ್ಲಿ ಎಲ್ಲವನ್ನೂ  ರಕ್ಷಿಸಲಾಗುತ್ತಿಲ್ಲ. ೫೦೦ ಸ್ಮಾರಕ ಗುರುತಿಸಿ ರಕ್ಷಿಸುವುದರ ಜೊತೆಗೆ ದತ್ತು ಕೊಡುವ ಪ್ರಕ್ರಿಯೇಯನ್ನು ಶೀಘ್ರದ ತರುತ್ತೇವೆ  ಎಂದರು.

ವಿದೇಶಗಲ್ಲಿರುವ ಭಾರತೀಯರಿಗೆ ತಮ್ಮ ಊರಿನ, ಗ್ರಾಮದ ಸ್ಮಾರಕಗಳ ಬಗ್ಗೆ ಅಭಿಮಾನದ ಆಸಕ್ತಿ ಇದೆ. ಇದರಿಂದ  ಅವರು  ತಮ್ಮ ಗ್ರಾಮದ ಅಭಿಮಾನವಿದೆ. ಅಂತಹವರು ತಮ್ಮ ಊರಿನ ಸ್ಮಾರಕಗಳನ್ನು ದತ್ತು ತೆಗೆದುಕೊಳ್ಳಲು ಆಸಕ್ತರಾಗಿದ್ದರೆ.  ಹೀಗಾಗಿ ಸ್ಮಾರಕಗಳನ್ನು ಮುಂದಿನ ದಿನಗಳಲ್ಲಿ ದತ್ತು ತೆಗೆದುಕೊಳ್ಳುವವರಿಗೆ ಸರ್ಕಾರ ಪ್ರೋತ್ಸಾಹ ನೀಡಲಿದೆ ಎಂದು  ತಿಳಿಸಿದರು.

ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, ಜಿಲ್ಲೆಯಲ್ಲಿ ಕೇವಲ ಅರಮನೆ, ಮೃಗಾಲಯ ಮಾತ್ರವಲ್ಲದೇ 24ಕ್ಕೂ ಹೆಚ್ಚು ಪ್ರವಾಸಿ ತಾಣಗಳಿವೆ. ಇವುಗಳನ್ನು ಜಗತ್ತಿಗೆ ತೋರಿಸಬೇಕು. ಮೈಸೂರು ಪ್ರವಾಸಿಗರಿಗೆ ಸುರಕ್ಷಿತವಾಗಿದೆ ಎಂದು ತಿಳಿಸಬೇಕು.  ದಸರಾ ಹಾಗೂ ಅರಮನೆ ಮಾತ್ರ ಪ್ರವಾಸೋದ್ಯಮದ ಕೇಂದ್ರ ಬಿಂದುವಲ್ಲ. ತಲಕಾಡಿನ ಸೋಮನಾಥಪುರ ಸೇರಿದಂತೆ  ಹಲವಾರು ತಾಣಗಳಿವೆ. ಅವುಗಳನ್ನು ಪ್ರವಾಸಿಗರಿಗೆ ತಲುಪುವಂತೆ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಸಕರಾದ ರವಿಶಂಕರ್, ದರ್ಶನ್ ಧ್ರುವನಾರಾಯಣ್, ಎಂಎಲ್‌ಸಿ ಸಿ.ಎನ್.ಮಂಜೇಗೌಡ, ಜಿಪಂ  ಸಿಇಒ ಕೆ.ಎಂ.ಗಾಯತ್ರಿ, ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಎಂ.ಕೆ.ಸವಿತಾ, ಪುರಾತತ್ವ ಇಲಾಖೆ ಆಯುಕ್ತ  ದೇವರಾಜು, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್ ಸೇರಿದಂತೆ ಇತರರು ಹಾಜರಿದ್ದರು.

Ashika S

Recent Posts

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

1 hour ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

2 hours ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

2 hours ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

2 hours ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

3 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

3 hours ago