ಮೈಸೂರು: ನಗರದ ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ ಇಂದು ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿ.ಆರ್ ಧ್ರುವನಾರಾಯಣ ಅವರ ಪುತ್ರ ದರ್ಶನ್ ಧ್ರುವನಾರಾಯಣ ಅವರಿಗೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೀಡಲಾಯಿತು.
ಈ ವೇಳೆ ಹಾಜರಿದ್ದು ದರ್ಶನ್ ಧ್ರುವನಾರಾಯಣ ಅವರಿಗೆ ಸದಸ್ಯತ್ವ ನೋಂದಣಿ ರಶೀದಿಯನ್ನು ವರುಣ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ ಹಸ್ತಾಂತರಿಸಿ ಶುಭ ಹಾರೈಸಿದರು
ಇದೆ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ ಬಿ ಜೆ ವಿಜಯ್ ಕುಮಾರ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.