ಮೈಸೂರು: ಈ ಬಾರಿಯ ನಾಡಹಬ್ಬ ಮೈಸೂರು ದಸರಾಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ದಸರಾದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿಗೆ ಗಜಪಡೆಯನ್ನು ತಯಾರಿ ಮಾಡಬೇಕಾಗಿರುವುದರಿಂದ ಸೆ.1ರಂದು ಸಾಂಪ್ರದಾಯಿಕ ಗಜಪಯಣಕ್ಕೆ ಮುನ್ನುಡಿ ಬರೆಯಲಾಗುತ್ತಿದೆ.
ಈ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಮಾಹಿತಿ ನೀಡಿದ್ದು, ಹುಣಸೂರು ತಾಲೂಕಿನ ವೀರನಹೊಸಳ್ಳಿಯಲ್ಲಿ 14 ಆನೆಗಳ ಗಜಪಯಣ ನಡೆಯಲಿದೆ. ಆ ಮೂಲಕ ದಸರಾ ಸಂಭಮ ಅಧಿಕೃತವಾಗಿ ಆರಂಭಗೊಳ್ಳಲಿದೆ ಎಂದು ಹೇಳಿದರು.
ದಸರಾ ಮಹೋತ್ಸವವನ್ನು ಚೆನ್ನಾಗಿ ಆಚರಿಸುವಂತೆ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಾಗಾಗಿ ವಿಶೇಷ ಅನುದಾನ ಕೇಳಿಲ್ಲ. ದಸರಾ ಉದ್ಘಾಟಕರ ಆಯ್ಕೆಯನ್ನು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದೇವೆ ಎಂದು ಹೇಳಿದರು. ದಸರಾ ಆರಂಭಕ್ಕೂ ಮುನ್ನವೇ ಶಾಸಕರು, ಅಧಿಕಾರಗಳೊಂದಿಗೆ ಬಸ್ ಮೂಲಕ ತೆರಳಿ ನಗರ ಪ್ರದಕ್ಷಿಣೆ ಮಾಡುತ್ತೇನೆ. ನಗರದ ಮುಖ್ಯರಸ್ತೆ ಬದಿಯಲ್ಲಿ ಶುಚಿತ್ವದ ಜತೆಗೆ ಸೌಂದರೀಕರಣ ಪರಿಶೀಲನೆ ಮಾಡುವುದಾಗಿ ತಿಳಿಸಿದರು.