News Karnataka Kannada
Saturday, May 04 2024
ಮೈಸೂರು

ಮೈಸೂರು: ಮತದಾನದ ಹಕ್ಕನ್ನು ಕಳೆದುಕೊಳ್ಳಬೇಡಿ-ತಿಮ್ಮಪ್ಪ

Mysuru: Don't lose your right to vote: Thimmappa
Photo Credit : By Author

ಮೈಸೂರು: ಪ್ರತಿಯೊಬ್ಬರಿಗೂ ಮತದಾನದ ಹಕ್ಕು ಇದೆ. ಅದನ್ನು ಯಾರೂ ಕೂಡ ಕಳೆದುಕೊಳ್ಳಬಾರದು ಎಂದು ತಹಸೀಲ್ದಾರ್ ತಿಮ್ಮಪ್ಪ ಹೇಳಿದರು.

ನಗರದಲ್ಲಿ ಆಯೋಜಿಸಿದ್ದ ಕಡ್ಡಾಯ ಮತದಾನದ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಏಪ್ರಿಲ್ 11ರವರೆಗೆ ಮತದಾರರ ಪಟ್ಟಿಗೆ ಹೊಸ ಹೆಸರು ಸೇರ್ಪಡೆಗೆ ಅವಕಾಶವಿದ್ದು, ತಮ್ಮ ಹೆಸರು ಮತದಾರರ ಪಟ್ಟಿಗೆ ಸೇರ್ಪಡೆಯಾಗಿರುವುದಿಲ್ಲವೋ ಅಂತಹವರು ಸೇರ್ಪಡೆಗೆ ಸಲ್ಲಿಸುವಂತೆ ತಿಳಿಸಿದರು. ಅರ್ಜಿ ಎಲ್ಲರಿಗೂ ಕೂಡ ಮತದಾನದ ಮಹತ್ವನ್ನು ತಿಳಿಸುವಂತಹ ಕೆಲಸವನ್ನು ಸರ್ವರೂ ಮಾಡಬೇಕು ಎಂದು ಕರೆ ನೀಡಿದರು.

ನಗರದ ಪ್ರಮುಖ ರಸ್ತೆಗಳಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಗ್ರಾಮ ಪಂಚಾಯಿತಿ ಪಿಡಿಓಗಳ ಹಾಗೂ ಸಿಬ್ಬಂದಿ ವರ್ಗದವರು ಅಂಗನವಾಡಿ ಕಾರ್ಯಕರ್ತರು ಕಂದಾಯ ಇಲಾಖೆಯವರ ವಿವಿಧ ಘೋಷಣೆಗಳನ್ನು ಕೂಗುತ್ತ ಜಾಗೃತಿ ಜಾಥಾವನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ತಾಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮಹೇಶ್, ಪಿಡಿಒ ಮಂಜುನಾಥ್, ಉಪ ತಹಸೀಲ್ದಾರ್ ಶರತ್ ಕುಮಾರ್, ರಾಜಸ್ವ ನಿರೀಕ್ಷರು ಹೇಮಂತ್, ತಾಲ್ಲೂಕು ಐಇಸಿ ಸಂಜಯ್ ಬಿ.ಸಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು