Categories: ಮೈಸೂರು

ಮೈಸೂರು: ಜೂಜಾಡುತ್ತಿದ್ದ ಎಂಟು ಮಂದಿಯ ಬಂಧನ

ಮೈಸೂರು: ಪ್ರತ್ಯೇಕ ಪ್ರಕರಣದಲ್ಲಿ ಜೂಜಾಡುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಜೂಜಾಟದಲ್ಲಿ ತೊಡಗಿದ್ದ 8 ಮಂದಿಯನ್ನು ಬಂಧಿಸಿ, 12,50,660 ರೂ.ನಗದು, 6 ಮೊಬೈಲ್‌ಗಳು, ಕೌಟಿಂಗ್ ಮೆಷನ್ ಮತ್ತು ಇಸ್ವೀಟ್ ಕಾರ್ಡ್ಗಳನ್ನು ವಶಪಡಿಸಿಕೊಂಡಿದ್ದಾರೆ.

ಮೈಸೂರು ನಗರದ ಸಿಸಿಬಿ ಪೊಲೀಸರಿಗೆ ದೊರೆತ ಖಚಿತ ವರ್ತಮಾನದ ಮೇರೆಗೆ ಮಾ.9ರಂದು ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಹಿನಕಲ್, ಹುಣಸೂರು ಮುಖ್ಯರಸ್ತೆಯಲ್ಲಿರುವ ಸಿಟಿ ಸ್ವೋಟ್ಸ್ ಕಬ್ಲ್  23/ಡಿ ಮೇಲೆ ದಾಳಿ ಮಾಡಿ ಹಣವನ್ನು ಪಣವಾಗಿಟ್ಟುಕೊಂಡು ಅಂದರ್-ಬಾಹರ್ ಇಸ್ವೀಟ್ ಜೂಜಾಟದಲ್ಲಿ ತೊಡಗಿದ್ದ 3 ಜನರನ್ನು ಬಂಧಿಸಿ ಜೂಜಾಟಕ್ಕೆ ಪಣವಾಗಿಟ್ಟಿದ್ದ 12,50,660 ರೂ ನಗದು ಹಣ, 6 ಮೊಬೈಲ್‌ಗಳು, ಕೌಂಟಿAಗ್ ಮೆಷನ್, ಇಸ್ವೀಟ್ ಕಾರ್ಡ್ ಗಳು ಹಾಗೂ ಟೋಕನ್ ಕಾಯಿನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪತ್ತೆ ಕಾರ್ಯವನ್ನು  ಸಿಸಿಬಿ ಘಟಕದ ಎಸಿಪಿ ಎಸ್.ಎನ್.ಸಂದೇಶ್‌ಕುಮಾರ್‌ರವರ ನೇತೃತ್ವದಲ್ಲಿ ಸಿಸಿಬಿ ಇನ್ಸ್ಪೆಕ್ಟರ್  ಅನೂಪ್ ಮಾದಪ್ಪ, ಎಎಸ್‌ಐಗಳಾದ  ಟಿ.ಸತೀಶ್, ಆರ್.ರಾಜು, ಅಸ್ಗರ್ ಖಾನ್ ಹಾಗೂ ಸಿಬ್ಬಂದಿಗಳಾದ ಪುರುಷೋತ್ತಮ, ಜೋಸ್ ನೊರೋನ್ಹ, ಪುಟ್ಟಮ್ಮ, ಚಂದ್ರಶೇಖರ್, ಮಮತ ಮತ್ತು ಶ್ರೀನಿವಾಸ್ ಪತ್ತೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಮತ್ತೊಂದು ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಹಣಕ್ಕೆ ಸಮಾನವಾದ ಕಾಯಿನ್‌ಗಳನ್ನು ಪಣವಾಗಿಟ್ಟುಕೊಂಡು ಅಂದರ್-ಬಾಹರ್ ಎಂಬ ಅದೃಷ್ಟದ ಜೂಜಾಟದಲ್ಲಿ ತೊಡಗಿದ್ದ 5 ಮಂದಿಯನ್ನು ಬಂಧನ. ಬಂಧಿತರಿಂದ 7.60 ಲಕ್ಷ ರೂ., ಮುಖ ಬೆಲೆಯ ವಿವಿಧ ಬಣ್ಣದ ಕಾಯಿನ್‌ಗಳು ಹಾಗೂ 4,105 ರೂ ನಗದು ಹಣ ವಶ ಪಡಿಸಿಕೊಳ್ಳಲಾಗಿದೆ.

ನಗರದ ಸಿಸಿಬಿ ಪೊಲೀಸರಿಗೆ ದೊರೆತ ಖಚಿತ ವರ್ತಮಾನದ ಮೇರೆಗೆ ಮಾ.9ರಂದು ಚಾಮುಂಡಿಬೆಟ್ಟದ ರಸ್ತೆಯಲ್ಲಿರುವ ಜೆ.ಸಿ.ನಗರದ ನಂ 05 ರ ಕಟ್ಟಡದ ಮೇಲೆ ದಾಳಿ ಮಾಡಿ ಹಣಕ್ಕೆ ಸಮಾನವಾದ ಕಾಯಿನ್‌ಗಳನ್ನು ಪಣವಾಗಿ ಕಟ್ಟಿಕೊಂಡು ಅಂದರ್-ಬಾಹರ್ ಎಂಬ ಅದೃಷ್ಟದ ಜೂಜಾಟದಲ್ಲಿ ತೊಡಗಿದ್ದ 5 ಜನರನ್ನು ಬಂಧಿಸಿ ಸ್ಥಳದಲ್ಲಿ ವಿವಿಧ

ಮುಖಬೆಲೆಯ ವಿವಿಧ ಬಣ್ಣದ 7.60. ಲಕ್ಷ ರೂ., ಮುಖಬೆಲೆಯ ಕಾಯಿನ್‌ಗಳನ್ನು ಹಾಗೂ 4,105 ರೂ.,ಗಳನ್ನು ವಶ ಪಡಿಸಿಕೊಂಡಿದ್ದಾರೆ. ಈ ಸಂಬಂಧ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪತ್ತೆ ಕಾರ್ಯವನ್ನು  ಸಿಸಿಬಿ ಘಟಕದ ಎಸಿಪಿ ಎಸ್.ಎನ್.ಸಂದೇಶ್‌ಕುಮಾರ್‌ರವರ ನೇತೃತ್ವದಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಸಿ.ಕೃಷ್ಣಕುಮಾರ್, ಪಿಎಸ್‌ಐಗಳಾದ ಎಂ.ರAಗಸ್ವಾಮಿ.ಎA, ಮಾರುತಿ ಅಂತರಗಟ್ಟಿ, ಸಿಬ್ಬಂದಿಗಳಾದ ಸಲೀಂಪಾಷ, ಉಮಾಮಹೇಶ್, ರವಿಶಂಕರ್, ಲಕ್ಷ್ಮಿಕಾಂತ್ ಮೋಹನಾರಾಧ್ಯ, ನರಸಿಂಹರಾಜು,  ಮಹೇಶ್ ಮತ್ತು ಕೆ.ಎಸ್.ರವಿ ಪತ್ತೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

Sneha Gowda

Recent Posts

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

2 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

16 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

18 mins ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

44 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

53 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

56 mins ago