ಮೈಸೂರು: ಭೂಮಿಯ ಮೇಲಿನ ಕಾಲ ಬದಲಾವಣೆ ಜಗದ ನಿಯಮ ಅದಕ್ಕೆ ಹೊಂದಿಕೊಂಡು ಜೀವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಮೇಯರ್ ಶಿವಕುಮಾರ್ ತಿಳಿಸಿದ್ದಾರೆ.
ಬಿಸಿಲ ತೀವ್ರತೆ ಹಿನ್ನೆಲೆಯಲ್ಲಿ ಪ್ರಾಣಿಪಕ್ಷಿಗಳಿಗೆ ನೀರಿನ ತೊಟ್ಟಿ ಹಾಗೂ ಆಹಾರದ ಬಟ್ಟಲು ಅಳವಡಿಸುವ ಮೂಲಕ ಹಾಗೂ ಜವಬ್ದಾರಿತ ಪ್ರಾಣಿ ಪಕ್ಷಿಪ್ರಿಯರಿಗೆ ಉಚಿತವಾಗಿ ನೀರಿನ ತೊಟ್ಟಿ ಕೊಡುವ ಮೂಲಕ ಮೂಕಸ್ಪಂದನಾ ಎಂಬ ಜಾಗೃತಿ ಅಭಿಯಾನ ಕೆಎಂಪಿಕೆ ಟ್ರಸ್ಟ್ ಹಾಗೂ ಪರಿಸರ ಸ್ನೇಹಿ ತಂಡ ಮತ್ತು ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ನೀರಿನ ತೊಟ್ಟಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಪಕ್ಷಿ ಪ್ರಾಣಿ ಪ್ರಿಯರಿಗೆ ಉಚಿತವಾಗಿ ನೀರಿನ ತೊಟ್ಟಿ ಹಾಗೂ ಆಹಾರದ ಬಟ್ಟಲು ವಿತರಿಸಿ ಮಾತನಾಡಿದರು.
ಭೂಮಿಯಲ್ಲಿ ಮನುಷ್ಯನಿಗೆ ಬದುಕಲಿರುವಷ್ಟೇ ಪ್ರಾಣಿಪಕ್ಷಿಗಳಿಗೂ ಅವಕಾಶವಿರುತ್ತದೆ, ಬಿಸಿಲಿನ ಬೇಗೆಯ ತಾಪಮಾನದಿಂದಾಗಿ ನಮ್ಮ ಬಡಾವಣೆಯ ಸುತ್ತಮುತ್ತಲು ನಮ್ಮೊಂದಿಗೆ ವಾಸಿಸುವ ಪ್ರಾಣಿಪಕ್ಷಿಗಳಿಗೆ ನೀರು ಆಹಾರ ನೀಡಲು ಮುಂದಾಗಬೇಕಿದೆ, ಆದಷ್ಟು ನಮ್ಮ ಮನೆಗಳ ತಾರಸಿಯ ಮೇಲೆ ಮನೆಯ ಮುಂಭಾಗ ನೀರು ಆಹಾರ ನೀಡಿದರೆ ಒಂದಷ್ಟು ಮೂಕ ಪ್ರಾಣಿಗಳಿಗೆ ಜೀವರಕ್ಷಣೆ ಮಾಡಿದಂತಾಗುತ್ತದೆ ಎಂದರು
ಮೂಡ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ರವರು ಮಾತನಾಡಿ ಹಲವು ವರ್ಷಗಳ ಹಿಂದೆ ಮೈಸೂರಿನ ಮನೆಗಳ ಮುಂದೆ ಹಸು ಕರು ಮೂಕ ಪ್ರಾಣಿ ಪಕ್ಷಿಗಳು ನೀರು ಕುಡಿಯಲು ಕಲ್ಲಿನ ನೀರಿನ ತೊಟ್ಟಿಯನ್ನು ನಿರ್ಮಿಸಲಾಗುತ್ತಿತ್ತು, ಪಶು ಪಕ್ಷಿಗಳು ಆನಂದದಿಂದ ನೀರು ಕುಡಿದು ತಣಿಸಿಕೊಳ್ಳುತ್ತಿದ್ದವು. ಆದರೆ ಈ ದಿನಗಳಲ್ಲಿ ಅವೆಲ್ಲವೂ ಕಣ್ಮರೆಯಾಗಿರುವುದು ವಿಷಾದನೀಯ ಎಂದರು.
ನಿಸರ್ಗದಲ್ಲಿ ಪಶು ಪಕ್ಷಿ ಜಲಚರಗಳ ಹಿರಿತನದಲ್ಲಿ ಮಾನವ ಇತ್ತೀಚಿನ ಸಂಕುಲ ತನ್ನ ಕ್ಷೇಮಕ್ಕಾಗಿ ಬಡಾವಣೆಗಳನ್ನು ನಿರ್ಮಿಸಿ ಕೊಂಡು ಕೆರೆ ಕಟ್ಟೆ ಗಳನ್ನು ಮುಚ್ಚಿ ವೃಕ್ಷಗಳನ್ನು ಕಡಿದು ಅಮಾಯ ಮೂಕ ಜೀವಿಗಳಿಗೆ ನೀರು ನೆರಳಿಲ್ಲದಂತೆ ಮಾಡಿರುವುದು ದುರಂತ. ಈ ನಿಟ್ಟಿನಲ್ಲಿ ಮಾನವೀಯತೆ ದೃಷ್ಟಿಕೋನದಿಂದ ನಾಗರಿಕರು ಈ ಬೇಸಿಗೆಯ ಧಗೆಯನ್ನು ನೀಗಿಸಲು ಮೂಕಪ್ರಾಣಿಗಳಿಗೆ ನೀರು ಆಹಾರವನ್ನು ನೀಡಿ ಸಕಲ ಜೀವರಾಶಿಗಳನ್ನು ಕಾಪಾಡಲು ಮುಂದಾಗಬೇಕೆಂದು ಕರೆ ನೀಡಿದರು.
ಬ್ರಾಹ್ಮಣ ಸಂಘದ ಅಧ್ಯಕ್ಷ ಡಿಟಿ.ಪ್ರಕಾಶ್ ಮಾತನಾಡಿ ಇತಿಹಾಸ ಪುರಾಣಗಳಲ್ಲಿ ಒಂದೊಂದು ಹಬ್ಬಗಳಲ್ಲಿ ಮತ್ತು ದೇವತೆಗಳಿಗೂ ಸಹ ಪ್ರಾಣಿಪಕ್ಷಿಗಳನ್ನು ವಾಹನಗಳಾಗಿ ಪೂಜಿಸಲಾಗಿದೆ ಇದು ಪರಿಸರ ಸಂರಕ್ಷಣೆಯ ಸಂದೇಶವಾಗಿದೆ ಎಂದರು.
ಕೇಂದ್ರ ಪ್ರಾಣಿಗಳ ಕಲ್ಯಾಣ ಮಂಡಳಿಯ ರಾಜ್ಯ ಚೇರ್ಮನ್ ಮಿತ್ತಲ್, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಹೇಮ ನಂದೀಶ್, ಆಯುರ್ ಪೋರ್ಟ್ ವೆಲ್ ನೈಸ್ ವ್ಯವಸ್ಥಾಪಕ ನಿರ್ದೇಶಕ ಭರತ್ ರಾಜ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕಡಕೋಳ ಜಗದೀಶ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷರಾದ ವಿಕ್ರಮ ಅಯ್ಯಂಗಾರ್, ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್, ಸವಿತಾ ಘಾಟ್ಕೆ , ಅಜಯ್ ಶಾಸ್ತ್ರಿ, ರವಿಶಂಕರ್, ಜಿ ರಾಘವೇಂದ್ರ, ರಾಕೇಶ್, ಸುಚೇಂದ್ರ, ಚಕ್ರಪಾಣಿ, ಎಸ್ ಎನ್ ರಾಜೇಶ್, ಮೋಹನ್ ಕುಮಾರ್ ಗೌಡ, ರವಿಚಂದ್ರ, ರಂಗನಾಥ್, ಟಿ ಎಸ್ ಅರುಣ್, ರಾಜಗೋಪಾಲ್, ನವೀನ್, ಸುರೇಶ್ ಗೋಲ್ಡ್, ಮೈ ಲಾ ವಿಜಯ್ ಕುಮಾರ್, ಆನಂದ್, ಲಿಂಗರಾಜು, ಜೀವನ್, ವಾಸುದೇವಮೂರ್ತಿ ಇನ್ನಿತರರು ಇದ್ದರು.