Categories: ಮೈಸೂರು

ಮೈಸೂರು: ಪುಟ್ಟಣ್ಣ ಕಣಗಾಲ್ ಸ್ಮರಣಾರ್ಥ ಗೀತ ಸಂಭ್ರಮ

ಮೈಸೂರು: ನಗರದ ಶಾರದಾದೇವಿನಗರದ ಗಾನ ಚಂದನ ಕಲಾಬಳಗದ ವತಿಯಿಂದ ನಾದಬ್ರಹ್ಮ ಸಂಗೀತ ಸಭಾದಲ್ಲಿ ಗಾಯಕರಾದ ಆರ್.ಸುಧೀಂದ್ರ ಹಾಗೂ ವಿಶ್ವನಾಥ ಶಾಸ್ತ್ರಿಯವರ ಸಾರಥ್ಯದಲ್ಲಿ ಆಯೋಜಿಸಿದ್ದ ಕನ್ನಡದ ಪ್ರಖ್ಯಾತ ಚಲನಚಿತ್ರ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಸ್ಮರಣಾರ್ಥ ಅವರು ನಿರ್ದೇಶಿಸಿದ್ದ ಚಿತ್ರಗಳಿಂದ ಆಯ್ದ ಗೀತೆಗಳನ್ನು ಗೀತ ಸಂಭ್ರಮ ಗಮನಸೆಳೆಯಿತು.

ಕಾರ್ಯಕ್ರಮದಲ್ಲಿ ಮಳೆಯ ಸಿಂಚನದ ನಡುವೆಯೂ ಯಶಸ್ವಿಯಾಗಿ ಪ್ರೇಕ್ಷಕರ ಮನಸ್ಸನ್ನು ಸೂರೆಗೊಂಡಿತು. ತಂಡದ ಗಾಯಕರು 70-80ರ ದಶಕದ ಹಳೆಯ, ಉತ್ತಮ ಗೀತರಚನೆ, ಇಂಪಾದ ಸಂಗೀತದಿಂದ ಕೂಡಿದ ಹಾಡುಗಳನ್ನು ಸಭಿಕರಿಗೆ ಪ್ರಸ್ತುತಪಡಿಸಿದರು.

ಧರ್ಮಸೆರೆ ಚಿತ್ರದ ಮೂಕ ಹಕ್ಕಿಯು ಹಾಡುತಿದೆ, ಮಾನಸ ಸರೋವರ ಚಿತ್ರದ ಮಾನಸ ಸರೋವರ, ಪಡುವಾರಹಳ್ಳಿ ಪಾಂಡವರು ಚಿತ್ರದ ತೂಕಳಿಸಿ ತೂಕಳಿಸಿ ಬೀಳದಿರೊ ತಮ್ಮ, ಶರಪಂಜರ ಚಿತ್ರದ ‘ಕೊಡಗಿನ ಕಾವೇರಿ, ರಂಗನಾಯಕಿ ಚಿತ್ರದ ‘ಕನ್ನಡ ನಾಡಿನ ರಸಿಕರ ಮನವ, ಶುಭಮಂಗಳ ಚಿತ್ರದ ಹೂವೊಂದು ಬಳಿಬಂದು, ಸಾಕ್ಷಾತ್ಕಾರ ಚಿತ್ರದ ಜನ್ಮ ಜನ್ಮದ ಅನುಬಂಧ, ನಾಗರಹಾವು ಚಿತ್ರದ ’ಹಾವಿನ ಧ್ವೇಷ, ಅಮೃತ ಘಳಿಗೆ ಚಿತ್ರದ ’ಹಿಂದೂ ಸ್ಥಾನವು ಎಂದೂ ಮರೆಯದ ಹೀಗೆ ಇನ್ನೂ ಅನೇಕ ಚಿತ್ರದ ಹಾಡುಗಳನ್ನು ತಂಡದ ಕಲಾವಿದರಾದ ಆರ್.ಸುಧೀಂದ್ರ, ವಿಶ್ವನಾಥ ಶಾಸ್ತ್ರಿ, ಆರ್.ನಟರಾಜ್, ಶ್ರೀನಿವಾಸ್, ಗೋಪಾಲಕೃಷ್ಣ, ನಾಗರಾಜ್, ಶೀಲಾದರ್, ಸಿಂಚನ ಹಾಗೂ ಶಶಿಕಲಾರವರು ಮೂರು ತಾಸುಗಳಿಗೂ ಅಧಿಕ ಸಮಯ ಸಭಿಕರಿಗೆ ಉಣಬಡಿಸಿದರು.

ಇದೇ ಸಂದರ್ಭದಲ್ಲಿ ಉಪಾಸನೆ ಚಿತ್ರದಲ್ಲಿ ಸಂಪಿಗೆ ಮರದ ಹಸಿರೆಲೆ ನಡುವೆ ಕೋಗಿಲೆ ಹಾಡಿತ್ತು ಹಾಡಿಗೆ ಬಾಲ ನಟಿಯಾಗಿ ಅಭಿನಯಿಸಿದ್ದ ಮೈಸೂರು ಆಕಾಶವಾಣಿಯ ಹಿರಿಯ ಕಲಾವಿದೆ ವಿದುಷಿ ರಾಜಲಕ್ಷ್ಮಿಯವರನ್ನು ಸಂಸ್ಥೆಯ ವತಿಯಿಂದ ಗೌರವಿಸಿ, ಸನ್ಮಾನಿಸಲಾಯಿತು.

ನಂತರ ಕಾರ್ಯಕ್ರಮ ನಿರೂಪಣೆ ಮಾಡಿದ ಗಾಯಕ ಆರ್.ಸುಧೀಂದ್ರ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿ, ಪುಟ್ಟಣ್ಣನವರು ತಮ್ಮ ಪ್ರಬುದ್ಧ ನಿರ್ದೇಶನದ ಮೂಲಕ ಪ್ರೇಕ್ಷಕರ ಜೀವನದಲ್ಲಿ ಉತ್ತಮ ಪರಿಣಾಮಗಳನ್ನು ಬೀರುವ ಸಂದೇಶಗಳನ್ನು ರವಾನೆ ಮಾಡುತ್ತಿದ್ದರು. ಇದು ನಿಮ್ಮ ಕಾರ್ಯಕ್ರಮ., ಕಲೆ ನಿರಂತರವಾಗಿ, ಶಾಶ್ವತವಾಗಿ ಇರಬೇಕೆಂಬ ಉದ್ದೇಶದಿಂದ ಯಾರಿಂದಲೂ, ಏನನ್ನೂ ಅಪೇಕ್ಷಿಸದೇ ನಮ್ಮ ಸಂಸ್ಥೆಯ ಪದಾಧಿಕಾರಿಗಳ ನೆರವಿನಿಂದ ಈ ಕಾರ್ಯiಕ್ರಮವನ್ನು ಆಯೋಜಿಸಿದ್ದೇವೆ ಎಂದು ತಿಳಿಸಿದರು.

Sneha Gowda

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

22 mins ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

39 mins ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

55 mins ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

1 hour ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

2 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

2 hours ago