News Karnataka Kannada
Tuesday, May 07 2024
ಮೈಸೂರು

ಮೈಸೂರು: ಪ್ರತೀ ಮನೆ ಬಾಗಿಲಿಗೂ ಆರೋಗ್ಯ ಸೇವೆ

ಆರೋಗ್ಯ ಅಮೃತ ಅಭಿಯಾನ ಯೋಜನೆ
Photo Credit : By Author

ಮೈಸೂರು: ಗ್ರಾಮೀಣ ಭಾಗದಲ್ಲಿ ಆರೋಗ್ಯ ಸೇವೆ ಪ್ರತಿಯೊಂದು ಮನೆ ಬಾಗಿಲಿಗೂ ತಲುಪಿಸುವ ನಿಟ್ಟಿನಲ್ಲಿ ಆರೋಗ್ಯ ಅಮೃತ ಅಭಿಯಾನ ಯೋಜನೆ ಜಾರಿಗೆ ಬಂದಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಾಯತ್ರಿ ತಿಳಿಸಿದರು.

ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನ ಯೋಜನೆ ಅಡಿ ಅನಿಮಿಯಾ ಮುಕ್ತ ಗ್ರಾಮ ಪಂಚಾಯಿತಿ ಹಾಗೂ ಮುಟ್ಟಿನ ನೈರ್ಮಲ್ಯ, ಅಸಾಂಕ್ರಾಮಿಕ ರೋಗಗಳ ತಪಾಸಣೆ ಕುರಿತು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿಯಲ್ಲಿ ಇತರೆ ಇಲಾಖೆಗಳ ಸಹಕಾರದಲ್ಲಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಿ, ಗ್ರಾಮೀಣ ಜನರ ಆರೋಗ್ಯ ಕಾಳಜಿಗೆ ಒತ್ತು ನೀಡುವಂತೆ ತಿಳಿಸಿದರು. ಬಳಿಕ ತರಬೇತಿಯ ಕೈಪಿಡಿ ಬಿಡುಗಡೆ ಗೊಳಿಸಿದರು.

ಉಪ ಕಾರ್ಯದರ್ಶಿ ಕೃಷ್ಣರಾಜು ಮಾತನಾಡಿ, ತರಬೇತಿ ಪಡೆದು, ಜಿಪಿಟಿಎಫ್ ಸದಸ್ಯರಿಗೆ ಉತ್ತಮ ರೀತಿಯಲ್ಲಿ ಮಾಹಿತಿ ನೀಡಿ ಹಾಗೂ ಗ್ರಾಮ ಪಂಚಾಯತಿಗಳನ್ನು ಅನಿಮಿಯಾ ಮುಕ್ತ, ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯಿತಿಗಳನ್ನಾಗಿ ಮಾಡಲು ಎಲ್ಲರೂ ಶ್ರಮಿಸುವಂತೆ ಸಂಯೋಜಕರಿಗೆ ತಿಳಿಸಿದರು.

ತರಬೇತಿಯಲ್ಲಿ ಡಿಎಚ್‌ಇಒ ಮುಣಿಂದ್ರಮ್ಮ ಅನಿಮಿಯಾ ಮುಕ್ತ ಗ್ರಾಮ ಪಂಚಾಯಿತಿ ಕುರಿತು, ಆಡಿ ಅರ್ಚನಾ ಸಾಂಕ್ರಮಿಕಾ ರೋಗ ಲಕ್ಷಣ ಕುರಿತು, ಸವಿತಾ ರವರು ಮುಟ್ಟಿನ ನೈರ್ಮಲ್ಯ ಕುರಿತು ಹಾಗೂ ಜಿಲ್ಲಾ ಪಂಚಾಯತ್ ಸಹ ಕಾರ್ಯದರ್ಶಿ ಶ ಕುಲದೀಪ್ ರವರು ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನ ಯೋಜನೆ ಕುರಿತು ಹಾಗೂ ನಾಗೇಂದ್ರ ಅವರು ಸೂಕ್ಷ್ಮ ಯೋಜನೆ ಕುರಿತು ತರಬೇತಿ ನೀಡಿದರು.

ತರಬೇತಿಯಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ತಾಲೂಕು ಆರೋಗ್ಯ ಅಧಿಕಾರಿಗಳು, ಕ್ಷೇತ್ರ ಆರೋಗ್ಯ ಶಿಕ್ಷಣ ಅಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು, ಆಶಾ ಮೆಂಟರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣ ಅಧಿಕಾರಿಗಳು ಮತ್ತು ಏಊPಖಿ ಯ ಜಿಲ್ಲಾ ಹಾಗೂ ತಾಲೂಕು ಸಂಯೋಜಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು