ಮೈಸೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಗುರುವಾರ ನಂಜನಗೂಡಿನ ನಂಜುಂಡೇಶ್ವರ ದೇಗುಲದಲ್ಲಿ ವಿಶೇಷ ಪೂಜೆ, ಹೋಮ ಸಲ್ಲಿಸಿದರು.
ದೇವರ ದರ್ಶನ ಪಡೆದ ಹೆಚ್.ಡಿ.ದೇವೇಗೌಡ ದಂಪತಿಗೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಜೆಡಿಎಸ್ ಕಾರ್ಯಕರ್ತರು ತುಲಾಭಾರ ಮಾಡಿ ದೇವರಿಗೆ ನೈವೇದ್ಯ ಅರ್ಪಿಸಿ ಭವ್ಯ ಸ್ವಾಗತ ಕೋರಿದರು.
ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹೆಚ್.ಡಿ.ದೇವೇಗೌಡರು ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿದ್ದು, ಆ ಪಕ್ಷದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ವಿದ್ಯಮಾನಗಳ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಮೇಕೆದಾಟು ಯೋಜನೆಗೆ ಅವಕಾಶ ನೀಡದ ನರೇಂದ್ರ ಮೋದಿ ವಿರುದ್ಧ ಮಾಜಿ ಪ್ರಧಾನಿ ಅಸಮಾಧಾನ ವ್ಯಕ್ತಪಡಿಸಿದರು.
ಮತ್ತೊಂದೆಡೆ ಮೋದಿ ತಮಿಳುನಾಡಿಗೆ ಸಮುದ್ರಕ್ಕೆ ಹರಿಯುವ ಕಾವೇರಿ ನದಿ ನೀರನ್ನು ಬಳಸಲು ಅವಕಾಶ ಮಾಡಿಕೊಟ್ಟರು. ಇದರಿಂದಾಗಿ ಸೇಲಂ ಜಿಲ್ಲೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ನಾಲ್ಕು ಲಕ್ಷ ಹೆಕ್ಟೇರ್ಗೆ ನೀರು ಬಳಕೆಯಾಗಲಿದೆ. ಇದರಿಂದ ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷಕ್ಕೆ ರಾಜಕೀಯ ಲಾಭವಾಗಲಿದೆ. ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಪ್ರಧಾನಿಗೆ ಪತ್ರ ಬರೆದಿದ್ದೆ. ಆದರೆ, ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಂಬರುವ ಸಂಸತ್ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಈ ಕುರಿತು ಪ್ರಸ್ತಾಪಿಸುವುದಾಗಿ ಎಚ್ಡಿ ದೇವೇಗೌಡರು ಹೇಳಿಕೆ ನೀಡಿದ್ದಾರೆ.
ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಯ ಅನುಷ್ಠಾನದ ಕುರಿತು ಮಾತನಾಡಿದ ಅವರು, ಏಕರೂಪದ ಪೌರತ್ವ ಅಸಾಧ್ಯ, ಇದರಿಂದ ಬಿಜೆಪಿ ಕಳೆದುಕೊಳ್ಳುತ್ತದೆಯೇ ಅಥವಾ ಲಾಭವಾಗುತ್ತದೆಯೇ ಎಂದು ತಿಳಿಯುವುದಿಲ್ಲ. ಆದರೆ, ಸಂವಿಧಾನದಲ್ಲಿ ಇದಕ್ಕೆ ಅವಕಾಶವಿಲ್ಲ, ಜಾರಿಗೆ ತರಲು ಮುಂದಾದರೆ ವಿರೋಧ ವ್ಯಕ್ತವಾಗುತ್ತದೆ.
ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ತಿಂಗಳಿನಿಂದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸುವುದಾಗಿ ಅವರು ಹೇಳಿದರು. ಚುನಾವಣಾ ಪ್ರಚಾರಕ್ಕೆ ಹೋಗುತ್ತೇನೆ ಎಂಬ ನಂಬಿಕೆ ಇದೆ’ ಎಂದರು.
ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಪಂಚರತ್ನ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಯಾತ್ರೆ ಸಾಗುವ ಪ್ರತಿ ಗ್ರಾಮಗಳಲ್ಲಿ ನಮ್ಮ ಪಕ್ಷದ ಶಾಸಕರು, ಮುಖಂಡರು, ಮಾಜಿ ಶಾಸಕರು ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಮನೆ ಮನೆಗೆ ತೆರಳಿ ಪಕ್ಷಕ್ಕಾಗಿ ದುಡಿಯುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇನೆ ಎಂದರು.
ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಖಾಯಂ ಅಲ್ಲ ಎಂದರು. ಪಟ್ಟಿ ಪ್ರತಿದಿನ ಬದಲಾಗುತ್ತದೆ. ಪ್ರತಿದಿನ ಸಮೀಕ್ಷೆ ನಡೆಯುತ್ತಿದೆ. ಅದರ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಶಿವಲಿಂಗೇಗೌಡ, ಕುಮಾರಸ್ವಾಮಿ ಜತೆ ಮಾತನಾಡಿದರು. ದ್ವಂದ್ವವಿದೆ; ಸಮಸ್ಯೆ ಇನ್ನೂ ಬಗೆಹರಿದಿಲ್ಲ’ ಎಂದು ಪ್ರತಿಕ್ರಿಯಿಸಿದರು.
ಹಾಸನದಲ್ಲಿ ಬಿ.ಎಸ್.ಯಡಿಯೂರಪ್ಪ ಸರ್ಕಾರವಿದ್ದಾಗ ಶಾಸಕ ಪ್ರೀತಮ್ ಗೌಡ ಅವರಿಗೆ ಎಲ್ಲ ಅಧಿಕಾರ ನೀಡಲಾಗಿತ್ತು. ಅದರಿಂದ ಅವನು ಗಳಿಸಿದ ಹಣವೆಷ್ಟು? ಅವರ ಶಕ್ತಿ ಯಡಿಯೂರಪ್ಪ ಮತ್ತು ಅವರ ಪುತ್ರರಿಂದಾಗಿದೆ. ಅವರ ಭಯಕ್ಕೆ ನಾವು ಬಗ್ಗುವುದಿಲ್ಲ’ ಎಂದು ಗುಡುಗಿದರು.
ಹಾಸನ ಟಿಕೆಟ್ಗಾಗಿ ಪಕ್ಷದಲ್ಲಿ ಹಲವು ಆಕಾಂಕ್ಷಿಗಳಿದ್ದಾರೆ. ಕುಮಾರಸ್ವಾಮಿ ಹಾಗೂ ಎಚ್.ಡಿ.ರೇವಣ್ಣ ಚರ್ಚಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ’ ಎಂದ ಅವರು, ‘ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಜನರೇ ನಿರ್ಧರಿಸುತ್ತಾರೆ’ ಎಂದರು.