ಮೈಸೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡಿದ್ದು ತಪ್ಪು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು.
ನ.16ರಂದು ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಟಿಪ್ಪು ಜಯಂತಿ ಆಚರಿಸಿದ್ದು ತಪ್ಪು, ನಮ್ಮಲ್ಲಿ ಜಯಂತಿ ಆಚರಣೆ ಇಲ್ಲ, ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸಿದ್ದೆ, ವೋಟ್ ಬ್ಯಾಂಕ್ನಿಂದಾಗಿ ಟಿಪ್ಪು ಜಯಂತಿ ಆಚರಿಸಲಾಗುತ್ತಿದೆ ಎಂದು ಟೀಕಿಸಿದರು.
ಮೈಸೂರು ಅಥವಾ ಶ್ರೀರಂಗಪಟ್ಟಣದಲ್ಲಿ 100 ಅಡಿ ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಿಸುವುದಾಗಿ ನರಸಿಂಹರಾಜ ಶಾಸಕ ತನ್ವೀರ್ ಸೇಠ್ ಹೇಳಿಕೆಯನ್ನು ಇಬ್ರಾಹಿಂ ವಿರೋಧಿಸಿದರು. ಪ್ರತಿಮೆ ಸ್ಥಾಪನೆಗೆ ನಮ್ಮಲ್ಲಿ ಅವಕಾಶವಿಲ್ಲ. ನಾವು ಪೂಜೆ ಮಾಡಬೇಕಿಲ್ಲ, ಕುಂಕುಮ ಹಚ್ಚಬೇಕು. ನಾವು ಮಾಡಬೇಕಾಗಿರುವುದು ಬಡವರಿಗೆ ಸಹಾಯ ಮಾಡುವುದು. ಇದು ನಮ್ಮಲ್ಲಿರುವ ಆಚರಣೆ. ಟಿಪ್ಪು ಪ್ರತಿಮೆ ಮಾಡುವ ಪ್ರಶ್ನೆಯೇ ಇಲ್ಲ. ಎಲ್ಲಿಯಾದರೂ ಮುಸ್ಲಿಂ ಪುರುಷರ ಪ್ರತಿಮೆ ಇದ್ದರೆ ತೋರಿಸಿ,’’ ಎಂದರು.