News Karnataka Kannada
Monday, April 29 2024
ಮೈಸೂರು

ಮೈಸೂರು: ಸೌಜನ್ಯ ಪ್ರಕರಣದ ಮರು ತನಿಖೆಗೆ ಪ್ರತಿಭಟನೆ

Mysuru: Protest against re-investigation of Soujanya case
Photo Credit : By Author

ಮೈಸೂರು: ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ವಿವಿಧ ಒಕ್ಕಲಿಗ ಸಂಘಟನೆಗಳ ವತಿಯಿಂದ ಮೇಣದಬತ್ತಿ ಮೆರವಣಿಗೆ ನಡೆಸಲಾಯಿತು.

ಅರಮನೆ ಮುಂಭಾಗದಿಂದ ಗಾಂಧಿ ವೃತ್ತದವರೆಗೆ ಕೈಯಲ್ಲಿ ಮೇಣದ ಬತ್ತಿ ಹಿಡಿದು ಮೌನ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಗಾಂಧಿ ವೃತ್ತದಲ್ಲಿ ಸಮಾವೇಶಗೊಂಡು ಪ್ರಕರಣದ ಮರು ತನಿಖೆಗೆ ಒತ್ತಾಯಿಸಿದರು. ೨೦೧೨ರ ಅಕ್ಟೋಬರ್‌ನಲ್ಲಿ ಈ ಪ್ರಕರಣ ನಡೆದಿದೆ. ಈಗ ರಾಷ್ಟ್ರವ್ಯಾಪಿ ಸುದ್ದಿಯೂ ಆಗುತ್ತಿದೆ. ಪೊಲೀಸರು ಬಂಧಿಸಿದ್ದ ಪ್ರಕರಣದ ಆರೋಪಿ ಸಂತೋಷ್ ರಾಜ್ ಅಪರಾಧಿಯಲ್ಲ ಎಂದು ಸೌಜನ್ಯಳ ಪೋಷಕರು ಹೇಳುತ್ತಿದ್ದರೂ ಆತನನ್ನೇ ಕೇಂದ್ರಿಕರಿಸಿಕೊಂಡು ತನಿಖೆ ನಡೆಸಲಾಯಿತು. ಬಳಿಕ ನ್ಯಾಯಾಲಯ ಆತ ನಿಜವಾದ ಆರೋಪಿಯಲ್ಲ ಎಂದು ಹೇಳಿದೆ. ಹೀಗಿರುವಾಗ ನಿಜವಾದ ಆರೋಪಿಗಳು ಬೇರೆ ಯಾರೋ ಇರಲೇಬೇಕು. ಆದ್ದರಿಂದ ಮರು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.

ಸಮುದಾಯದ ಮುಖಂಡರಾದ ಸತೀಶ್‌ಗೌಡ, ಗಂಗಾಧರಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಮರಿಸ್ವಾಮಿ, ರಾಜ್‌ಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು