News Karnataka Kannada
Saturday, May 04 2024
ಮೈಸೂರು

ಮೈಸೂರು: ಸಿಐಡಿ ವರದಿ ನಂತರ ಪಿಎಸ್‌ಐ ಪರೀಕ್ಷೆ- ಅರಗ ಜ್ಞಾನೇಂದ್ರ

Psi exam after CID report: Araga Jnanendra
Photo Credit : By Author

ಮೈಸೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಂತಿಮ ವರದಿ ಕೊಡುವವರೆಗೆ ಪರೀಕ್ಷೆ ನಡೆಸುವುದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ನಗರದ ಆಲನಹಳ್ಳಿ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್‌ಐ ಅಕ್ರಮ ನೇಮಕಾತಿ ಕುರಿತಂತೆ ತನಿಖೆ ನಡೆಯುತ್ತಿದೆ. ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ 107 ಜನ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂತಹ ವಿಚಾರ ನ್ಯಾಯಾಲಯದಲ್ಲಿರುವುದರಿಂದ ಹೆಚ್ಚು ಮಾತನಾಡುವುದು ಸೂಕ್ತವಲ್ಲ. ಅಕ್ರಮ ಕುರಿತು ಸಿಐಡಿ ಅಂತಿಮ ವರದಿ ನೀಡುವವರೆಗೆ ಪರೀಕ್ಷೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಪೊಲೀಸ್ ಅಧಿಕಾರಿಗಳ ವರ್ಗಾವಣೆ ಪಾರದರ್ಶಕವಾಗಿ ನಡೆಯುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಲಾಭಿ, ಒತ್ತಡದ ಪ್ರಶ್ನೆಯಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ಪೊಲೀಸ್ ಇಲಾಖೆ ಸುಧಾರಿಸಲು ಮತ್ತು ತ್ವರಿತಗತಿಯಲ್ಲಿ ಪ್ರಕರಣ ದಾಖಲಿಸಲು ಹಲವಾರು ಕ್ರಮ ಕೈಗೊಳ್ಳಲಾಗಿದೆ. ಆನ್‌ಲೈನ್‌ನಲ್ಲಿ ದೂರು ದಾಖಲು, 112 ಸಹಾಯವಾಣಿಗೆ ಕರೆ ಮಾಡಿದರೆ ನಗರ ಪ್ರದೇಶದಲ್ಲಿ 9ನಿಮಿಷ, ಗ್ರಾಮಾಂತರ ಪ್ರದೇಶದಲ್ಲಿ 20 ನಿಮಿಷಕ್ಕೆ ಹಾಜರಾಗಿ ಕ್ರಮ ಕೈಗೊಳ್ಳಲಾಗುವುದು. ವಂಚನೆ ಪ್ರಕರಣಗಳಲ್ಲಿ ಶಿಸ್ತುಕ್ರಮಕ್ಕೆ ಬದಲಾವಣೆ ತರಲಾಗಿದೆ. ಜಿಗೊಂದು ಮಹಿಳಾ ಪೊಲೀಸ್ ಠಾಣೆಯನ್ನು ಈಗಾಗಲೇ ತೆರೆಯಲಾಗಿದೆ. ಮಹಿಳಾ ಠಾಣೆಯಿದ್ದರೂ ಸಾಮಾನ್ಯ ಠಾಣೆಗಳಲ್ಲಿಯೂ ಮೂವರು ಮಹಿಳಾ ಸಿಬ್ಬಂದಿ ಇರುವುದು ಕಡ್ಡಾಯವಾಗಿದೆ. ಕೆಲವೆಡೆ ಹೆಚ್ಚಿನ ಸಿಬ್ಬಂದಿ ಕಾರ್ಯನಿರ್ವಸುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಶೇ.35ರಷ್ಟು ಹುದ್ದೆಗಳು ಖಾಲಿ ಇದ್ದವು. ಈಗ 12 ಸಾವಿರಕ್ಕೆ ಬಂದು ನಿಂತಿದೆ. ಮತ್ತೆ ೫ ಸಾವಿರ ಪೊಲೀಸರ ನೇಮಕಾತಿಗೆ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯದಲ್ಲಿ ಸ್ವಂತ ಕಟ್ಟಡ ಇಲ್ಲದ ಠಾಣೆಗಳಿಗೆ ಹೊಸದಾಗಿ ಕಟ್ಟಡಗಳನ್ನು ನಿರ್ಮಿಸುತ್ತಿದ್ದು, 117 ಕೋಟಿ ವೆಚ್ಚದಲ್ಲಿ ಹೊಸ ಠಾಣೆಗಳನ್ನು ನಿರ್ಮಾಣ ಮಾಡಲಾಗುವುದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು