ಸಾಹಿತ್ಯ ಹಾಗೂ ಪತ್ರಿಕೋದ್ಯಮದ ಅನನ್ಯ ಸೇವೆಗಾಗಿ ಮೈಸೂರು ಹಾಗೂ ಹಾಸನ ಬ್ಯುರೊ ವಿಜಯ ಕರ್ನಾಟಕ ಸ್ಥಾನಿಕ ಸಂಪಾದಕ ಐತಿಚಂಡ ರಮೇಶ್ ಉತ್ತಪ್ಪ “ಕಾವೇರಿ ಕರ್ನಾಟಕ ರತ್ನ” ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಾವೇರಿ ಕರ್ನಾಟಕ ಪ್ರಾದೇಶಿಕ ಸಾಂಸ್ಕೃತಿಕ ಮತ್ತು ಸಾಹಿತ್ಯ ಅಕಾಡೆಮಿ ಈ ಪ್ರಶಸ್ತಿ ಕೊಡ ಮಾಡುತ್ತಿದೆ. ಕಳೆದ 28 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ.
ಈಗಗಲೇ ಮೈಸೂರಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಫೆಲೋಶಿಪ್, ವಿದ್ಯಾನಿಧಿ ಪ್ರಶಸ್ತಿ, ಪತ್ರಿಕೋದ್ಯಮದಲ್ಲಿ ರಾಜ್ಯಮಟ್ಟದ 10 ಪ್ರಶಸ್ತಿ, ಯುಜಿಸಿಯಿಂದ ಚಿನ್ನದ ಪದಕ ಪಡೆದಿದ್ದಾರೆ. ಇಲ್ಲಿಯವರೆಗೆ 31 ಕೃತಿಗಳನ್ನು ಬರೆದಿದ್ದಾರೆ.