Categories: ಮೈಸೂರು

ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರಿಗೆ 27ನೇ ಸ್ಥಾನ

ಮೈಸೂರು: ದೇಶದ ಸ್ವಚ್ಛ ನಗರಗಳಲ್ಲಿ ಒಂದಾದ ಮೈಸೂರು ಕಳೆದ ಬಾರಿ ಎಂಟನೇ ಸ್ಥಾನದಲ್ಲಿದ್ದರೆ, ಈ ಬಾರಿಯ ಸ್ವಚ್ಛ ಸರ್ವೇಕ್ಷಣೆಯಲ್ಲಿ 27ನೇ ಸ್ಥಾನಕ್ಕೆ ಕುಸಿದಿದೆ. ಇದು ಮೈಸೂರಿಗರಿಗೆ ನಿರಾಸೆಯನ್ನು ತಂದಿದೆ.

ಇನ್ನು 3 ರಿಂದ 10 ಲಕ್ಷ ಜನ ಸಂಖ್ಯೆಯೊಳಗಿನ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನ ತಿರುಪತಿಗೆ ಸಿಕ್ಕಿದ್ದರೆ ಎರಡನೇ ಸ್ಥಾನ ಮೈಸೂರು ನಗರಕ್ಕೆ ಲಭಿಸಿರುವುದು ಸಮಾಧಾನ ತಂದಿದೆ. ಕೇಂದ್ರ ಸರಕಾರದ ನಗರಾಭಿವೃದ್ದಿ ಇಲಾಖೆಯಿಂದ ಕಳೆದ ಸಾಲಿನಲ್ಲಿ ದೇಶದಾದ್ಯಂತ ನಡೆಸಿದ ಸ್ವಚ್ಛ ಸರ್ವೇಕ್ಷಣಾ ಅಭಿಯಾನದಲ್ಲಿ ಮೈಸೂರು ನಗರ ಕೂಡ ಭಾಗಿಯಾಗಿತ್ತು.

ಕಳೆದ 2023ರ ಏಪ್ರಿಲ್ ಮತ್ತು ಮೇ ನಲ್ಲಿ ನಡೆದ ಸ್ವಚ್ಛ ಸರ್ವೇಕ್ಷಣೆಯಲ್ಲಿ ಕೇಂದ್ರ ಸರಕಾರದ ಅಧಿಕಾರಿಗಳ ತಂಡ ಮೈಸೂರು ನಗರಕ್ಕೆ ಆಗಮಿಸಿ ನಗರದ ಸ್ವಚ್ಛತೆ ನಿರ್ವಹಣೆ, ಘನತ್ಯಾಜ್ಯ ವಸ್ತು ನಿರ್ವಹಣೆ, ಮನೆ ಮನೆಯಿಂದ ಕಸ ಸಂಗ್ರಹ, ಸಾರ್ವಜನಿಕ ಶೌಚಾಲಯ ಸ್ಥಿತಿಗತಿ, ಮಳೆ ನೀರು ಮತ್ತು ಒಳಚರಂಡಿ ಸ್ಥಿತಿಗತಿ ಸೇರಿದಂತೆ ಹಲವು ವಿಭಾಗಳ ಪರಿಶೀಲನೆ ನಡೆಸುವುದರೊಂದಿಗೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ಪ್ರಶಸ್ತಿಗೆ ಪರಿಗಣನೆ ನಡೆಸಲಾಗಿತ್ತು.

ಮೈಸೂರು ನಗರ ದೇಶದ ಸ್ವಚ್ಛತಾ ನಗರಿ ಪಟ್ಟಿಯಲ್ಲಿ 27ನೇ ಸ್ಥಾನ ಪಡೆದಿದೆ. ಜತೆಗೆ 3 ರಿಂದ 10 ಲಕ್ಷ ಜನ ಸಂಖ್ಯೆ ವಿಭಾಗದಲ್ಲಿ ರಾಷ್ಟಮಟ್ಟದಲ್ಲಿ ಎರಡನೇ ಸ್ಥಾನ ಪಡೆದಿದೆ ಎಂದು ಪಾಲಿಕೆ ಆರೋಗ್ಯಾಧಿಕಾರಿ ಡಾ.ಎನ್.ವೆಂಕಟೇಶ್ ತಿಳಿಸಿದ್ದಾರೆ. ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ನಗರಾಭಿವೃದ್ದಿ ಸಚಿವರಿಂದ ಪಾಲಿಕೆಯ ಆಡಳಿತಾಧಿಕಾರಿ ಡಾ.ಜಿ.ಸಿ.ಪ್ರಕಾಶ್, ಪಾಲಿಕೆ ಆಯುಕ್ತ ಅಶಾದ್ ಉರ್ ರೆಹಮಾನ್ ಷರೀದ್, ಆರೋಗ್ಯಾಧಿಕಾರಿ ಡಾ.ಎನ್.ಪಿ.ವೆಂಕಟೇಶ್ ಸೇರಿದಂತೆ ಪಾಲಿಕೆ ಅಧಿಕಾರಿಗಳು ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಿದ್ದಾರೆ.

Ashika S

Recent Posts

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

18 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

22 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

37 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

43 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

54 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

1 hour ago