News Karnataka Kannada
Thursday, May 02 2024
ಮೈಸೂರು

ಮೈಸೂರು: ನರೇಗಾ ಯೋಜನೆಯಡಿ 3500ಕ್ಕೂ ಹೆಚ್ಚು ಮಂದಿಗೆ ಗಿಡಗಳ ವಿತರಣೆ

Saplings distributed to more than 3,500 people: C.R. Krishnakumar
Photo Credit : By Author

ಮೈಸೂರು: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ತಾಲ್ಲೂಕಿನ 34 ಗ್ರಾ.ಪಂ ವ್ಯಾಪ್ತಿಯಲ್ಲಿ 3500ಕ್ಕೂ ಹೆಚ್ಚು ಮಂದಿ ಫಲಾನುಭವಿಗಳಿಗೆ ಗಿಡಗಳನ್ನು ವಿತರಣೆ ಮಾಡಲಿದ್ದು, ಗಿಡಗಳ ಜೊತೆಗೆ 3190 ರೂ. ಕೂಲಿ ಮೊತ್ತ ದೊರಯಲಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಿ.ಆರ್.ಕೃಷ್ಣಕುಮಾರ್ ತಿಳಿಸಿದರು.

ಸೋಮವಾರ ತಾಲ್ಲೂಕಿನ ಕಂಪಲಾಪುರ ಗ್ರಾಮಪಂಚಾಯಿತಿ ಎದುರು “ವೈಯಕ್ತಿಕ ಪೌಷ್ಠಿಕ ಕೈ ತೋಟ ನಿರ್ಮಾಣಕ್ಕೆ ಗಿಡಗಳನ್ನು ವಿತರಿಸಿ” ಮಾತನಾಡಿದ ಅವರು, ತೋಟಗಾರಿಕೆ ಇಲಾಖೆ ವತಿಯಿಂದ ಆರೋಗ್ಯಕ್ಕೆ ಪೂರಕವಾದಂತಹ ಗಿಡಗಳನ್ನು ಫಲಾನುಭವಿಗಳಿಗೆ ಒದಗಿಸಲಾಗಿದೆ. ಗಿಡಗಳನ್ನು ಈ ದಿನವೇ ನಾಟಿ ಮಾಡಿ, ಸಂರಕ್ಷಿಸುವುದು ನಿಮ್ಮ ಜವಾಬ್ದಾರಿಯಾಗಿದೆ. ಗಿಡಗಳನ್ನು ಮಾರಾಟ ಮಾಡದೇ, ಸ್ವತಃ ತಮ್ಮ ಜಮೀನಿನಲ್ಲಿ ನಾಟಿ ಮಾಡಿಕೊಂಡು ಅದರ ಲಾಭ ಪಡೆಯಬೇಕು ಎಂದು ಸಲಹೆ ನೀಡಿದರು.

ಪ್ರತಿ ಗ್ರಾ.ಪಂ ಮಟ್ಟದಲ್ಲಿ ಸ್ವ-ಸಹಾಯ ಸಂಘದ 101 ಮಂದಿ ಫಲಾನುಭವಿಗಳನ್ನು ಆಯ್ಕೆಮಾಡಿದ್ದು, ಪ್ರತಿ ಫಲಾನುಭವಿಗೆ ತೆಂಗು, ನುಗ್ಗೆ, ನಲ್ಲಿ, ಕರಿಬೇವು, ನಿಂಬೆ, ಚಕ್ರಮುನಿ, ಸೀಬೆ, ಸಪೋಟ ಸೇರಿದಂತೆ ಒಟ್ಟು 15 ಗಿಡಗಳನ್ನು ವಿತರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಬಿ.ಎನ್.ಸುವೇದ ಮಾತನಾಡಿ, ಮಹಿಳೆಯರು ಗಿಡಗಳನ್ನು ತಮ್ಮ ಜಮೀನಿನಲ್ಲಿ ನಾಟಿ ಮಾಡಿ, ಅಗತ್ಯ ಗೊಬ್ಬರ, ನೀರು ಪೂರೈಸಬೇಕು. ತೆಂಗು, ಚಕ್ರಮುನಿ, ನಿಂಬೆ, ಕರಿಬೇವು ಹೀಗೆ ಉಪಯುಕ್ತವಾದ ಗಿಡಗಳನ್ನು ವಿತರಿಸುತ್ತಿದ್ದು, ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರಾದ(ಗ್ರಾ.ಉ) ಕರುಣಾಕರ್, ಗ್ರಾಮಪಂಚಾಯಿತಿ ಅಧ್ಯಕ್ಷರಾದ ಮಮತಾ, ಉಪಾಧ್ಯಕ್ಷರು ಕೆ.ಎನ್.ರಾಮಲಿಂಗ, ಪಿಡಿಒ ಪರಮೇಶ್, ಎಂಜಿನಿಯರ್ ರಶ್ಮಿ, ಐಇಸಿ ಸಂಯೋಜಕ ಡಿ.ರವಿಕುಮಾರ್ ಸೇರಿದಂತೆ ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು