ಮೈಸೂರು: ಮಂಚೇಗೌಡನಕೊಪ್ಪಲಿನ ಕ್ಷೇಮಾಭಿವೃದ್ಧಿ ಸಂಘವು ಆಯೋಜಿಸಿದ್ದ ಶ್ರೀ ವರಸಿದ್ದಿ ವಿನಾಯಕ ಸ್ವಾಮಿ ಹಾಗೂ ನವಗ್ರಹ ಪ್ರತಿಷ್ಠಾಪನಾ ಮಹೋತ್ಸವ ಮತ್ತು ಶ್ರೀರಾಮಮಂದಿರ ಪೂಜಾ ಮಹೋತ್ಸವ, ಶ್ರೀ ವರಸಿದ್ಧಿ ವಿನಾಯಕ ದೇವರ ಗೋಪುರ ಪೂಜಾ ಮಹೋತ್ಸವಕ್ಕೆ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ ಚಾಲನೆ ನೀಡಿದರು.
ನಗರದ ಮಂಚೇಗೌಡನ ಕೊಪ್ಪಲಿನಲ್ಲಿ ಆಯೋಜಿಸಿದ್ದ ಮಹೋತ್ಸವದಲ್ಲಿ ಪೂರ್ಣಕುಂಭ ಸ್ವಾಗತದೊಂದಿಗೆ ಸ್ವಾಮೀಜಿಗಳು ಧಾರ್ಮಿಕ ಕಾರ್ಯವನ್ನು ನೇರವೇರಿಸಿಕೊಟ್ಟರು. ಬಳಿಕ ಮಾತನಾಡಿದ ಅವರು, ನಮ್ಮಲ್ಲಿರುವ ದೈವತ್ವ ಗುಣದ ಮೂಲಕ ಉತ್ತಮ ಸಂಸ್ಕಾರವನ್ನು ಅಳವಡಿಸಿಕೊಳ್ಳಬೇಕು. ಪಡೆದ ಶಿಕ್ಷಣ ಉನ್ನತ ಮಟ್ಟಕ್ಕೆ ಕೊಂಡೊಯ್ದರೆ, ಧರ್ಮ ನಮ್ಮನ್ನು ಸಂಸ್ಕಾರವಂತರನ್ನಾಗಿಸುತ್ತದೆ ಎಂದು ಹೇಳಿದರು.
ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮನಾಥಸ್ವಾಮೀಜಿ, ಶಾಸಕರಾದ ಎಲ್.ನಾಗೇಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ, ಮಾಜಿ ವಾಸು, ಕಾಂಗ್ರೆಸ್ ಮುಖಂಡ ಕೊಪ್ಪಲು ಹರೀಶ್ಗೌಡ, ಕವೀಶ್ಗೌಡ, ನಗರಪಾಲಿಕೆ ಸದಸ್ಯರಾದ ಕೆ.ವಿ.ಶ್ರೀಧರ್, ಪ್ರೇಮಾಶಂಕರೇಗೌಡ, ಮಂಚೇಗೌಡನಕೊಪ್ಪಲಿನ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಿ.ರಾಮಚಂದ್ರು, ಉಪಾಧ್ಯಕ್ಷ ಸಿ.ಮಂಜುನಾಥ್, ಕಾರ್ಯದರ್ಶಿ ರವಿ ಮಂಚೇಗೌಡನಕೊಪ್ಪಲು ಇನ್ನಿತರರು ಉಪಸ್ಥಿತರಿದ್ದರು.