ಮೈಸೂರು: ಶರಣು ವಿಶ್ವವಚನ ಫೌಂಡೇಷನ್ ವತಿಯಿಂದ ಎಲ್ಲರೂ ಕನ್ನಡವನ್ನು ಸರಿಯಾಗಿ ಬಳಕೆ ಮಾಡುವ ಸುದುದ್ದೇಶದಿಂದ ಸ್ವಚ್ಛ ಕನ್ನಡ ಭಾಷಾ ಅಭಿಯಾನವನ್ನು ಪ್ರಾರಂಭಿಸಲಾಗಿದೆ ಎಂದು ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕ ವಚನ ಕುಮಾರಸ್ವಾಮಿ ತಿಳಿಸಿದ್ದಾರೆ.
ವಿವಿಧ ಅಂಗಡಿ, ಮನೆ, ಆಸ್ಪತ್ರೆ, ಕಛೇರಿ, ಮಾಲ್ ಮುಂತಾದ ಕಡೆ ಕನ್ನಡದಲ್ಲಿ ನಾಮಫಲಕ ಹಾಕುವಾಗ ಕನ್ನಡ ಬರೆವಣಿಗೆಗೆ ಸಂಬಂಧಿಸಿದಂತೆ ಅನೇಕ ತಪ್ಪುಗಳಾಗುತ್ತಿದ್ದು, ಇತರರು ಅದನ್ನು ನೋಡಿ ಅನುಕರಣೆ ಮಾಡುತ್ತಿರುವುದರಿಂದ ಕನ್ನಡ ಭಾಷೆಯ ಬರವಣಿಗೆ ತಪ್ಪಾಗಿ ಪ್ರಚಾರವಾಗುತ್ತಿದೆ. ಕನ್ನಡ ಭಾಷೆಯನ್ನು ತಪ್ಪಾಗಿ ಅರ್ಥೈಸಿ ಕೊಳ್ಳುತ್ತಿರುವುದನ್ನು ಕಡಿವಾಣ ಹಾಕುವ ಸದುದ್ದೇಶದಿಂದ ಅನೇಕ ಸಮಾನ ಮನಸ್ಕರ ಸಹಯೋಗದೊಂದಿಗೆ ಸ್ವಚ್ಛ ಕನ್ನಡ ಭಾಷಾ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ವಿಶ್ವದಾದ್ಯಂತ ಕನ್ನಡವನ್ನು ಬರೆವಣಿಗೆಯಲ್ಲಿ ಬಳಕೆ ಮಾಡುವವರು ಸರಿಯಾದ ಕನ್ನಡದ ಬರೆವಣಿಗೆಗೆ ಸಂಬಂಧಿಸಿದಂತೆ 9901137948 ಮೊಬೈಲ್ ನಂಬರನ್ನು ಸಂಪರ್ಕಿಸಬಹುದಾಗಿದೆ.
ಯಾವುದೇ ರೀತಿಯ ನಾಮಫಲಕ ಮತ್ತು ವಿವಿಧ ಪುಸ್ತಕಗಳ ತಿದ್ದುಪಡಿಗೆ ಸಂಬಂಧಿಸಿದಂತೆ ಉಚಿತವಾಗಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.