News Karnataka Kannada
Tuesday, May 07 2024
ಮೈಸೂರು

ಮೈಸೂರು: ಈಡಿಗ ಸಮುದಾಯದ ಹತ್ತು ಮಂದಿಗೆ ಟಿಕೆಟ್ ನೀಡಲು ಆಗ್ರಹ

Mysuru: Ten members of the Idiga community have been demanding tickets for them.
Photo Credit : By Author

ಮೈಸೂರು: ಈ ಬಾರಿಯ ವಿಧಾನಸಭಾ ಚುನಾವಣೆ ವೇಳೆ ಆರ್ಯ ಈಡಿಗ ಸಮುದಾಯಕ್ಕೆ ಮೂರು ಪಕ್ಷಗಳೂ ತಲಾ ಹತ್ತು ಟಿಕೆಟ್ ನೀಡಬೇಕು. ಇಲ್ಲದಿದ್ದಲ್ಲಿ ಮುಂಬರುವ ಏಪ್ರಿಲ್ ಎರಡರಂದು ಶಿವಮೊಗ್ಗದಲ್ಲಿ ನಡೆಯುವ ಸಮುದಾಯದ ಸಭೆಯಲ್ಲಿ ನಿರ್ಣಾಯಕ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಮುದಾಯದ ಪ್ರಣವಾನಂದ ಸ್ವಾಮೀಜಿ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಒಂದು ವೇಳೆ ಪಕ್ಷಗಳು ಸಮುದಾಯದ ಆಕಾಂಕ್ಷಿಗಳಿಗೆ ಟಿಕೆಟ್ ನೀಡದಿದ್ದಲ್ಲಿ ಪಕ್ಷೇತರವಾಗಿಯೂ ಅವರು ಸ್ಪರ್ಧಿಸಬಹುದಾಗಿದೆ. ಇಲ್ಲವೇ ಚುನಾವಣೆಯನ್ನೇ ಬಹಿಷ್ಕರಿಸಬಹುದಾಗಿದೆ ಎಂದು ನುಡಿದರು.

ಇಡೀ ರಾಜ್ಯದಲ್ಲಿ ಸಮುದಾಯದ ಜನಸಂಖ್ಯೆ ಸುಮಾರು 60 ರಿಂದ 70 ಲಕ್ಷದಷ್ಟಿದೆ. ಇವರು ಈಡಿಗ, ನಾಮಧಾರಿ, ಬಿಲ್ಲವ ಮೊದಲಾದ ಹೆಸರಿನಿಂದ ಕರೆಯಲ್ಪಡುತ್ತಿದ್ದಾರೆ. ಆದರೆ ಇವರಿಗೆ ಯಾವುದೇ ಪಕ್ಷ ಸೂಕ್ತ ಪ್ರಾತಿನಿಧ್ಯ ನೀಡಿಲ್ಲದಿರುವುದು ಬೇಸರದ ಸಂಗತಿಯಾಗಿದೆ. ಅಲ್ಲದೆ, ಶಿವಮೊಗ್ಗ, ಮಂಗಳೂರು, ಉಡುಪಿ, ಕಾರವಾರ, ಕಲ್ಯಾಣ ಕರ್ನಾಟಕ ಭಾಗದಲ್ಲೂ ಸಮುದಾದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಇಲ್ಲೆಲ್ಲ ಪ್ರಾತನಿಧ್ಯ ನೀಡಬೇಕೆಂದು ಒತ್ತಾಯಿಸಿದರು.

ಸಮುದಾಯದ ಮುಖಂಡರಾದ ಮುರಳೀಧರ್, ವಸಂತಕುಮಾರ್, ವಾಸು ಹಾಗೂ ಗೋಪಿ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು