News Karnataka Kannada
Sunday, April 28 2024
ಮೈಸೂರು

ಮೈಸೂರು: ಅಂಬೇಡ್ಕರ್ ಭೇಟಿ ನೀಡಿದ ಸ್ಥಳಗಳನ್ನು ಯಾತ್ರಾ ಸ್ಥಳಗಳಾಗಿ ಅಭಿವೃದ್ಧಿ

The places visited by Dr. B.R. Ambedkar have been developed into pilgrimage sites.
Photo Credit : By Author

ಮೈಸೂರು: ಬಿಜೆಪಿ ಎರಡು ದಿನಗಳ ರಾಷ್ಟ್ರೀಯ ಎಸ್‌ಸಿ ಮೋರ್ಚಾ ಕಾರ್ಯಕಾರಿಣಿ ಯಲ್ಲಿ ರಾಜ್ಯದಲ್ಲಿ ಅಂಬೇಡ್ಕರ್ ಭೇಟಿ ನೀಡಿದ ಸ್ಥಳಗಳನ್ನು ಯಾತ್ರಾ ಸ್ಥಳಗಳಾಗಿ ಅಭಿವೃದ್ಧಿ ಪಡಿಸುವುದು, ದಲಿತರ ಮೀಸಲಾತಿ ಪ್ರಮಾಣ ಹೆಚ್ಚಿಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವುದು, ಸೇರಿದಂತೆ ಮೂರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ದಲಿತರ ಸಬಲೀಕರಣ, ಕೇಂದ್ರ ರಾಜ್ಯ ಸರ್ಕಾರಗಳ ಯೋಜನೆಗಳನ್ನು ಜನರಿಗೆ ತಲುಪಿಸುವುದು, ಮುಂದಿನ ಚುನಾವಣೆಯಲ್ಲಿ ದಲಿತ ಮತಗಳು ಬಿಜೆಪಿ ಪರ ವಾಲುವಂತೆ ಮಾಡಲು ನಗರದಲ್ಲಿ ನಡೆದ ಮೂರು ದಿನಗಳ ಬಿಜೆಪಿ ಎಸ್‌ಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಅಂತ್ಯವಾಗಿದೆ.

ನಗರದ ಲಲಿತಮಹಲ್‌ನಲ್ಲಿ ಭಾನುವಾರ ಮುಕ್ತಾಯಗೊಂಡ ಎಸ್ಸಿ ಮೋರ್ಚಾ ರಾಷ್ಟ್ರೀಯ ಸಮಾವೇಶದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಪರಿಶಿಷ್ಟ ಜಾತಿ ಸಮುದಾಯಗಳ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾಗಿರುವ ಕಾರ್ಯಕ್ರಮಗಳು ಮತ್ತು ಯೋಜನೆಗಳ ಕುರಿತು ಚರ್ಚಿಸಲು ಸದ್ಯದಲ್ಲಿಯೇ ದಲಿತ ಶಾಸಕರ ನಿಯೋಗದೊಡನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲಾಗುವುದು ಎಂದು ಹೇಳಿದರು.

ಈ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಕೈಗೊಂಡ ರಾಜಕೀಯ ನಿರ್ಣಯಗಳನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೊಳಿಸಲಾಗುತ್ತದೆ. ನಾವು ರಾಜ್ಯದಲ್ಲಿ ಕೈಗೊಳ್ಳಬೇಕಾದ ತೀರ್ಮಾನವನ್ನು ಮುಖ್ಯಮಂತ್ರಿಗಳೊಡನೆ ಚರ್ಚಿಸುತ್ತೇವೆ. ಈಗ ನಡೆದ ಕಾರ್ಯಕಾರಿಣಿಯಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ದಲಿತರ ಅಭಿವೃದ್ಧಿಪರ ಯೋಜನೆಗಳನ್ನು ಮುಕ್ತಕಂಠದಿಂದ ಸ್ವಾಗತಿಸಿ, ಅಭಿನಂದಿಸುವ ನಿರ್ಣಯ ಕೈಗೊಳ್ಳಲಾಯಿತು ಎಂದರು.

ಕಾರ್ಯಕಾರಿಣಿಯಲ್ಲಿ ದೇಶದ ವಿವಿಧೆಡೆಯಿಂದ 139 ಮಂದಿ ಪಾಲ್ಗೊಂಡಿದ್ದರು. ಅಲ್ಲದೆ ಕರ್ನಾಟಕ ಬಿಜೆಪಿಯ ಸಂಘಟನಾತ್ಮಕ 39 ಜಿಲ್ಲೆಗಳ ಪೈಕಿ ೩೫ ಜಿಲ್ಲೆಯಿಂದ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಎಲ್ಲರೂ ಈ ಕಾರ್ಯಕಾರಿಣಿ ಆಯೋಜನೆಯ ಶಿಸ್ತು ಬದ್ಧತೆ ಮೆಚ್ಚಿದ್ದಾರೆ. ನಮ್ಮ ಆತಿಥ್ಯಕ್ಕೆ ಧನ್ಯವಾದ ಅರ್ಪಿಸಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಎಸ್‌ಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಲಾಲ್‌ಸಿಂಗ್ ಆರ್ಯ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮೇಯರ್ ಶಿವಕುಮಾರ್, ನಗರ ಬಿಜೆಪಿ ಅಧ್ಯಕ್ಷಟಿ.ಎಸ್.ಶ್ರೀವತ್ಸ, ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ವಕ್ತಾರ ಮಹೇಶರಾಜೇ ಅರಸ್, ಜಿಲ್ಲಾ ವಕ್ತಾರ ವಸಂತಕುವಾರ್ ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು