ಮೈಸೂರು: ಮೈಸೂರಿನ ಕಂಪಲಾಪುರದಲ್ಲಿ ಮಂಗಳವಾರ ನಸುಕಿನ ಜಾವ ನಿಂತಿದ್ದ ಟ್ರ್ಯಾಕ್ಟರ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.
ಮೃತರನ್ನು ಮುದ್ದಸ್ಸಿರ್, ಮುಜಾಹಿದ್ ಮತ್ತು ಅಹ್ಮದ್ ಪಾಷಾ ಎಂದು ಗುರುತಿಸಲಾಗಿದೆ. ಸಂತ್ರಸ್ತರು ಪಿರಿಯಾಪಟ್ಟಣದಿಂದ ಹುಣಸೂರು ಪಟ್ಟಣಕ್ಕೆ ತೆರಳುತ್ತಿದ್ದರು.
ಮುಂಜಾನೆ 4.30ರ ವೇಳೆಗೆ ವೇಗವಾಗಿ ಬಂದ ಕಾರು ಚಾಲಕ ಮುಂದೆ ನಿಂತಿದ್ದ ಟ್ರ್ಯಾಕ್ಟರ್ ಅನ್ನು ಗಮನಿಸದೆ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿರಿಯಾಪಟ್ಟಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಅಪಘಾತದ ರಭಸಕ್ಕೆ ಕಾರು ಟ್ರ್ಯಾಕ್ಟರ್ ಅಡಿಯಲ್ಲಿ ಸಿಲುಕಿಕೊಂಡಿದೆ.