ಮೈಸೂರು: ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ವತಿಯಿಂದ ಕೊಡಮಾಡುವ 2022 ನೇ ಸಾಲಿನ ‘ಕನ್ನಡ ವಿಕಾಸ ರತ್ನ’ ಪ್ರಶಸ್ತಿಗೆ ಸಂಘಟನೆ, ಪ್ರಕಾಶನ, ಸಾಹಿತ್ಯ ಕ್ಷೇತ್ರದ ಮೂರು ಮಂದಿ ನಗರದ ಯುವ ಸಾಧಕರು ಆಯ್ಕೆಯಾಗಿದ್ದಾರೆ ಎಂದು ವೇದಿಕೆಯ ರಾಜ್ಯಾಧ್ಯಕ್ಷೆ ಹೆಚ್.ಎಲ್. ಯಮುನಾ ತಿಳಿಸಿದ್ದಾರೆ.
ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಕಾರ್ಯದರ್ಶಿ ಡಾ. ಬಿ.ಬಸವರಾಜು (ಸಾಂಸ್ಕೃತಿಕ ಸಂಘಟನೆ), ವಿಸ್ಮಯ ಪ್ರಕಾಶನದ ಮಾಲೀಕ ಹಾಲತಿ ಲೋಕೇಶ್ (ಪುಸ್ತಕ ಪ್ರಕಾಶನ), ಯುವ ಸಾಹಿತಿ ಹಾಗೂ ರಂಗಕರ್ಮಿ ಎಸ್. ಶಿಶಿರಂಜನ್ (ಸಾಹಿತ್ಯ ಮತ್ತು ರಂಗಭೂಮಿ) ಈ ಮೂರ ಮಂದಿ ಪ್ರತಿಭಾವಂತರನ್ನು ಅವರವರ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ ಸೇವಾ ಸಾಧನೆಗಾಗಿ ‘ಕನ್ನಡ ವಿಕಾಸ ರತ್ನ’ ಪ್ರಶಸ್ತಿಗೆ ಪರಿಗಣಿಸಲಾಗಿದೆ.
ಡಿ. 10ರಂದು ವಿಜಯನಗರದ ಜಿಲ್ಲಾ ಸಾಹಿತ್ಯ ಭವನದಲ್ಲಿ ಖ್ಯಾತ ಪತ್ರಿಕೋದ್ಯಮಿ ಹಾಗೂ ವಿಚಾರವಾದಿ ರಾಜಶೇಖರ ಕೋಟಿ ಸ್ಮರಣಾರ್ಥ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಹೆಚ್.ಕೆ. ರಾಮು, ಶಾಸಕರಾದ ಸಿ.ಎನ್. ಮಂಜೇಗೌಡ, ಎಲ್. ನಾಗೇಂದ್ರ, ಶಿಕ್ಷಣೋದ್ಯಮಿ ವಿ. ಕವೀಶ್ ಗೌಡ, ಸಾಹಿತಿ. ಟಿ. ಸತೀಶ್ ಜವರೇಗೌಡ ಮತ್ತಿತರ ಗಣ್ಯರ ಸಮಕ್ಷಮದಲ್ಲಿ ನಡೆಯಲಿರುವ ‘ಕನ್ನಡ ಹಬ್ಬ’ದಲ್ಲಿ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…
ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…
ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.
ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್ ಶವವಾಗಿ ಪತ್ತೆಯಾಗಿದ್ದಾನೆ.
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…