Categories: ಮೈಸೂರು

ಮೈಸೂರು: ಕಾಡುಹಂದಿ ಬೇಟೆಯಾಡಿದ ಹುಲಿ, ವೈರಲ್ ಆದ ವಿಡಿಯೋ

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಯು ಕಾಡುಹಂದಿಯನ್ನು ಅಟ್ಟಿಸಿಕೊಂಡು ಹೋಗಿ ಬೇಟೆಯಾಡಿದ ಘಟನೆಯನ್ನು ಪ್ರವಾಸಿಗರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದಿರುವ ಆಘಾತಕಾರಿ ಘಟನೆ ನಡೆದಿದೆ.

ಸಫಾರಿ ವೇಳೆ ಅತಿ ಹೆಚ್ಚು ಹುಲಿಗಳು ಕಾಣಸಿಗುವ ದಮ್ಮನಕಟ್ಟೆ ಅರಣ್ಯ ವ್ಯಾಪ್ತಿಯ ಕಾಕನಕೋಟೆ ಬಳಿ ಪ್ರವಾಸಿಗರ ಸಮ್ಮುಖದಲ್ಲಿ ಹುಲಿ ಕಾಡುಹಂದಿಯನ್ನು ಬೇಟೆಯಾಡುತ್ತಿರುವ ಅಪರೂಪದ ದೃಶ್ಯ ಸೆರೆಯಾಗಿದೆ.

ದಮ್ಮನಕಟ್ಟೆ ಅರಣ್ಯ ವ್ಯಾಪ್ತಿಯಲ್ಲಿ ಪ್ರವಾಸಿಗರ ವಾಹನದ ಎದುರು ಹುಲಿ ಕಾಡುಹಂದಿಯನ್ನು ಹಿಂಬಾಲಿಸಿದೆ. ಕಾಡುಹಂದಿ ಎಷ್ಟೇ ದೂರ ಓಡಿದರೂ ಹುಲಿ ಮನಬಂದಂತೆ ಬೇಟೆಯಾಡಿದ ದೃಶ್ಯ ಪ್ರವಾಸಿಗರ ಕಣ್ಮನ ಸೆಳೆಯಿತು.

ನಾಗರಹೊಳೆಯ ವೀರನ ಹೊಸಹಳ್ಳಿ, ನಾನಾಚಿ ಗೇಟ್ ಮತ್ತು ದಮ್ಮನಕಟ್ಟೆಯಿಂದ ಸಫಾರಿ ಮಾಡಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ. ವೀರನ ಹೊಸಹಳ್ಳಿ ಮತ್ತು ನಾನಚಿ ಗೇಟ್ ಸಫಾರಿ ಪ್ರದೇಶಕ್ಕಿಂತ ಹೆಚ್ಚು ಪ್ರವಾಸಿಗರು ದಮ್ಮನಕಟ್ಟೆಯಲ್ಲಿ ಪ್ರತಿನಿತ್ಯ ಹುಲಿಗಳನ್ನು ನೋಡುತ್ತಾರೆ. ಹಾಗಾಗಿ ಇಲ್ಲಿ ಸಫಾರಿಗಳಿಗೆ ಭಾರಿ ಬೇಡಿಕೆ ಇದೆ.

ಆಹಾರ ಅರಸಿ ಕಾಡಿನಲ್ಲಿ ಅಲೆದಾಡುತ್ತಿದ್ದ ಕಾಡುಹಂದಿ ಎದುರಿಗೆ ಬಂದ ಹುಲಿಯನ್ನು ಕಂಡು ಪ್ರಾಣ ಉಳಿಸಿಕೊಳ್ಳಲು ಓಡಿ ಬಂದರೂ ಪ್ರಯೋಜನವಾಗಲಿಲ್ಲ. ಕಾಡುಹಂದಿ ಸುಮಾರು ಎರಡು ನಿಮಿಷಗಳ ಕಾಲ ಕಾದಾಡಿದರೂ, ಹುಲಿಯು ಕಾಡುಹಂದಿಯನ್ನು ಬೇಟೆಯಾಡಿ ತನ್ನ ಹಸಿವನ್ನು ತಣಿಸಿಕೊಂಡಿತು.

Sneha Gowda

Recent Posts

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ಆಗಬೇಕು: ಪ್ರಹ್ಲಾದ್ ಜೋಶಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರ, ಸಂಪೂರ್ಣ ಈ ಕೇಸ್ ನಲ್ಲಿ ಅತ್ಯಂತ ಗೊಂದಲವಿದೆ. ನಮ್ಮ ಪಾರ್ಟಿ ಹಾಗೂ…

13 mins ago

ಬಿರುಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಅರಳಿ ಮರ: ನಾಲ್ಕು ಮನೆಗಳು ಜಖಂ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಅರಳಿ ಮರವೊಂದು ಬೇರು ಸಮೇತ ನಾಲ್ಕು ಮನೆಗಳ ಮೇಲೆ ಉರುಳಿ ಬಿದ್ದು ಮನೆಗಳು…

26 mins ago

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

50 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

1 hour ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

1 hour ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

1 hour ago