ಮೈಸೂರು

ಮೈಸೂರು: ವಾರಾಂತ್ಯಕ್ಕೆ ತುಘಲಕ್‌ ನಾಟಕ ಪ್ರದರ್ಶನ

ಮೈಸೂರು: ಕ್ರಿ.ಶ. 1327ರಲ್ಲಿ ದಿಲ್ಲಿಯಲ್ಲಿ ನಡೆಯುವ ಘಟನೆಗಳನ್ನು ಆಧರಿಸಿ ಮನುಷ್ಯನ ಸಾರ್ವಕಾಲಿಕ ಅನುಭವಕ್ಕೆ ರೂಪಕವಾಗಿ ಗಿರೀಶ್ ಕಾರ್ನಾಡರು ಕಟ್ಟಿಕೊಟ್ಟಿರುವ ‘ತುಘಲಕ್’ ನಾಟಕ ಪ್ರದರ್ಶನ ವಾರಾಂತ್ಯಕ್ಕೆ ಮೈಸೂರಿನ ಕಲಾಮಂದಿರದಲ್ಲಿರುವ ಕಿರುರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.

ಜೂನ್ 18ರಂದು ಶನಿವಾರ ಸಂಜೆ 6.30ಕ್ಕೆ ಪ್ರದರ್ಶನಗೊಳ್ಳಲಿರುವ ಈ ನಾಟಕವನ್ನು ರಂಗಾಯಣದ ಹಿರಿಯ ಕಲಾವಿದ ಮಾಯಸಂದ್ರ ಕೃಷ್ಣಪ್ರಸಾದ್ ನಿರ್ದೇಶಿಸಿದ್ದಾರೆ. ತನ್ನ ಆದರ್ಶಗಳನ್ನು ಸಾಕಾರಗೊಳಿಸಲು ಹಲವಾರು ಬದಲಾವಣೆಗಳನ್ನು ತರಲು ಪ್ರಯತ್ನಿಸುವ ಮಹಮದ್ ಬಿನ್ ತುಘಲಕ್, ಆರ್ಥಿಕ ಉಪಯೋಗಕ್ಕಾಗಿ ಬೆಳ್ಳಿ ನಾಣ್ಯದ ಬದಲಿಗೆ ತಾಮ್ರದ ನಾಣ್ಯ ಚಲಾವಣೆ, ರಾಜ್ಯಾಡಳಿತದ ಅನುಕೂಲಕ್ಕಾಗಿ ರಾಜಧಾನಿಯ ಬದಲಾವಣೆ, ಜೂಜಿಗೆ ಹೆಚ್ಚು ತೆರಿಗೆ ವಿಧಿಸಿ ಶಾಲೆ-ಆಸ್ಪತ್ರೆಗಳ ಸ್ಥಾಪನೆ ಹೀಗೆ ಹಲವಾರುಕ್ರಾಂತಿಕಾರಿ ಪರಿವರ್ತನೆಗಳಿಗೆ ಆದೇಶಿಸುತ್ತಾನೆ. ತನ್ನಉದ್ದೇಶವನ್ನು ವಿರೋಧಿಸಿದ ಆಂತರಿಕ ಹಾಗೂ ಬಾಹ್ಯ ಶತ್ರುಗಳನ್ನು ನಾಶಗೊಳಿಸುವುದು ನಾಟಕದ ಕಥಾವಸ್ತುವಾಗಿದೆ.

ರಂಗದ ಮೇಲೆ ನಾಟಕಕ್ಕೆ ಮಂಜುನಾಥಶಾಸ್ತ್ರಿ, ರವಿಪ್ರಸಾದ್, ಮುರಳಿ ಗುಂಡಣ್ಣ, ರಶ್ಮಿ ನಾರಾಯಣ್, ಹರಿಪ್ರಸಾದ್, ರಾಘವೇಂದ್ರ ಬೂದನೂರು, ಮಂಜು ವಿ. ನರಸಾಪುರ, ವಿಜಯ್, ಪ್ರಣವ ಸ್ವರೂಪ್, ರಘು, ಶಿವಮೂರ್ತಿ, ಮಂಜುಆರ್., ಗುರುರಾಜ್, ಭಾರ್ಗವಿ, ಆದರ್ಶ, ನವೀನ್, ಪ್ರಜ್ವಲ್, ರಕ್ಷಿತ್, ಹೊಯ್ಸಳ ಎನ್, ಧನುಷ್, ಗೌತಮ್, ಸಂಜಯ್ ಜೀವ ತುಂಬಲಿದ್ದಾರೆ.

ಇನ್ನು ನಾಟಕಕ್ಕೆ ಬೆಳಕು -ಕೃಷ್ಣಕುಮಾರ್ ನಾರ್ಣಕಜೆ, ವಸ್ತ್ರವಿನ್ಯಾಸ – ಬಿ.ಎಂ. ರಾಮಚಂದ್ರ, ಸಂಗೀತ-ಉದಿತ್ ಹರಿತಸ್, ರಂಗಸಜ್ಜಿಕೆ ಮತ್ತು ಪರಿಕರ- ಮಂಜು ಕಾಚಕ್ಕಿ, ಸಹ ನಿರ್ದೇಶನ – ಹರಿಪ್ರಸಾದ್‌ಕಶ್ಯಪ್, ನಿರ್ವಹಣೆ- ಮಂಜುನಾಥಶಾಸ್ತ್ರಿ ಮಾಡಲಿದ್ದಾರೆ.

ನಾಟಕಕುರಿತ ಮಾಹಿತಿಗಾಗಿ 9916212451/ 9901626701/ 9964656482 ನ್ನು ಸಂಪರ್ಕಿಸಬಹುದಾಗಿದೆ.

Gayathri SG

Recent Posts

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

3 mins ago

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

10 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

17 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

29 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

34 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

49 mins ago