News Karnataka Kannada
Thursday, May 02 2024
ಮೈಸೂರು

ಮೈಸೂರು: ಪಂಚಮುಖಿ ಆಂಜನೇಯ ದೇಗುಲದಲ್ಲಿ ಅರಿಶಿನ ಕುಂಕುಮ ವಿತರಣೆ

Mysuru: Turmeric kumkum distributed at Panchamukhi Anjaneya Temple
Photo Credit : By Author

ಮೈಸೂರು: ನಗರದಲ್ಲಿ ಮನೆಗಳಲ್ಲಿ ಮತ್ತು ದೇಗುಲಗಳಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತಿದೆ. ಹಬ್ಬದ ಹಿನ್ನಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಹಾಗೂ ಇರ್ವಿನ್ ರಸ್ತೆಯಲ್ಲಿರುವ ಪಂಚಮುಖಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ 100 ಕ್ಕೂ ಹೆಚ್ಚು ಮಹಿಳಾ ಭಕ್ತಾಧಿಗಳಿಗೆ ವರಮಹಾ ಲಕ್ಷ್ಮಿ ಅಷ್ಟೋತ್ತರ ಪುಸ್ತಕ , ಅರಿಶಿನ ಕುಂಕುಮ ಮತ್ತು ಬಳೆಗಳನ್ನು ನೀಡಿ ವರಮಹಾಲಕ್ಷ್ಮಿ ಹಬ್ಬದ ಶುಭಾಶಯ ಕೋರಲಾಯಿತು.

ಈ ವೇಳೆ ಅರ್ಚಕರ ಸಂಘದ ಅಧ್ಯಕ್ಷರು ಹಾಗೂ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ವಿದ್ವಾನ್ ಎಸ್ ಕಷ್ಣಮೂರ್ತಿ ರವರು ಮಾತನಾಡಿ ಸರ್ಕಾರ ಮುಜುರಾಯಿ ಸಂಬಂಧಪಟ್ಟಂಥ ದೇವಸ್ಥಾನಗಳಲ್ಲಿ ಧಾರ್ಮಿಕ ಭಾವನೆ ಹೆಚ್ಚಿಸಲು ಸಾರ್ವಜನಿಕರಲ್ಲಿ ಇಂತಹ ವಿಭಿನ್ನ ಧಾರ್ಮಿಕ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಕಾರ್ಯಕ್ರಮವಾಗಿದೆ.

ಈ ವೇಳೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಲೇ ಬೇಕಾಗಿದೆ. ವರಮಹಾಲಕ್ಷ್ಮಿ ದೇವಿಯು ಎಲ್ಲ ದಾರಿದ್ರ್ಯ ನೀಗುವ ದೇವರಾಗಿದ್ದು ಎಲ್ಲರ. ಮನಸ್ಸಿನ ಮತ್ತು ಬಡತನದ ದಾರಿದ್ರ್ಯ ನೀಗಲಿ, ಎಲ್ಲರ ಬಾಳಿನಲ್ಲಿ ದೇವಿಯು ಬಂದು ಆಶೀರ್ವದಿಸಲಿ ಎಂದು ಹೇಳಿದರಲ್ಲದೆ, ಇಂತಹ ಧಾರ್ಮಿಕ ಹಬ್ಬಗಳನ್ನು ಸಮಾಜದ ಜೊತೆ ಬೆರೆತು ನಡೆಸಲು ಎಲ್ಲ ಭಕ್ತಾಧಿಗಳು ಮುಂದಾಗಬೇಕು ಎಂದು ಕರೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು