ಮೈಸೂರು

ಮೈಸೂರು: ಕಾರ್ಮಿಕರ ಬೋಗಸ್ ಕಾರ್ಡ್ ಪಡೆದವರ ವಿರುದ್ಧ ಕ್ರಮದ ಎಚ್ಚರಿಕೆ

ಮೈಸೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಮಂಡಳಿಯ ನಿರ್ದೇಶನಗಳನ್ನು ಅನುಸರಿಸಿ ಕ್ರಮ ವಹಿಸಿ, ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಫಲಾನುಭವಿಗಳೆಂದು ನೋಂದಣಿಯಾಗಿ ಮಂಡಳಿಯ ವಿವಿಧ ಸೌಲಭ್ಯಗಳನ್ನು ಪಡೆಯುತ್ತಿರುವ ಬೋಗಸ್ ಕಾರ್ಡ್‍ ಗಳನ್ನು ರದ್ದು ಮಾಡಲು ‘ಬೋಗಸ್ ಕಾರ್ಡ್ ನೋಂದಣಿ ರದ್ದತಿ ಅಭಿಯಾನ’ ಕಾರ್ಯಕ್ರಮವನ್ನು 2023 ರ ಜನವರಿ 25 ರಿಂದ ಫೆಬ್ರವರಿ 25 ರವರೆಗೆ ಹಮ್ಮಿಕೊಳ್ಳಲಾಗಿದೆ.

ಈ ಅವಧಿಯಲ್ಲಿ ನಕಲಿ ದಾಖಲಾತಿ ಸೃಷ್ಠಿಸಿ ಗುರುತಿನ ಚೀಟಿ ಪಡೆದಿರುವ ಫಲಾನುಭವಿಗಳು ತಮ್ಮ ಸ್ವ-ಇಚ್ಚೆಯಿಂದ ಮಂಡಳಿಗೆ ಅಂದರೆ ನೋಂದಣಾಧಿಕಾರಿಗಳಾದ ಹಿರಿಯ ಕಾರ್ಮಿಕ ನಿರೀಕ್ಷಕರ ಕಛೇರಿಗಳಿಗೆ ಗುರುತಿನ ಚೀಟಿಯನ್ನು ಹಿಂತಿರುಗಿಸಿದ್ದಲ್ಲಿ ಮುಂದಿನ ಕಾನೂನು ಕ್ರಮವನ್ನು ಕೈಬಿಡಲಾಗುವುದು. ಒಂದು ವೇಳೆ ನಕಲಿ ಕಾರ್ಮಿಕರು ಪರಿಶೀಲನೆಯ ವೇಳೆಯಲ್ಲಿ ಸಿಕ್ಕಿಬಿದ್ದಲ್ಲಿ ಗುರುತಿನ ಚೀಟಿಯನ್ನು ವಶಪಡಿಸಿಕೊಳ್ಳುವುದಲ್ಲದೆ, ಮುಂದಿನ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ.

ನಕಲಿ ಕಾರ್ಮಿಕರು ತಾವು ಪಡೆದಿರುವ ಗುರುತಿನ ಚೀಟಿಯನ್ನು ತಕ್ಷಣ ಕಾರ್ಮಿಕ ಇಲಾಖೆಗೆ ಒಪ್ಪಿಸಿ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳುವುದು ಹಾಗೂ ಇನ್ನು ಮುಂದೆ ಯಾರೂ ಸಹಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳಲ್ಲಿ ಕೆಲಸ ಮಾಡದವರು ಸುಳ್ಳು ಅಥವಾ ನಕಲಿ ದಾಖಲೆಗಳನ್ನು ಸೃಷ್ಠಿಸಿ ಮಂಡಳಿಯಿಂದ ಗುರುತಿನ ಚೀಟಿಯನ್ನು ಪಡೆಯಬಾರದೆಂದು ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

5 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

6 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

7 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

7 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

7 hours ago