News Karnataka Kannada
Monday, April 29 2024
ಮೈಸೂರು

ಮೈಸೂರು: ಸರಗೂರು ಬಳಿ ಜಮೀನಿಗೆ ನುಗ್ಗಿದ ಕಾಡಾನೆಗಳು

Mysuru: Wild elephants enter fields near Saragur
Photo Credit : By Author

ಮೈಸೂರು: ಮುಳ್ಳೂರು ಬೆಟ್ಟದಿಂದ ಆಹಾರ ಅರಸಿ ಬಂದ ಐದು ಕಾಡಾನೆಗಳು ಹೊಸಬಿರ್ವಾಳ್ ಗ್ರಾಮದ ರೈತರ ಜಮೀನಿಗೆ ನುಗ್ಗಿ ಕಬ್ಬು ಸೇರಿದಂತೆ ಇತರೆ ಬೆಳೆಯನ್ನು ತಿಂದು ತುಳಿದು ನಾಶಪಡಿಸಿದ ಘಟನೆ ನಡೆದಿದ್ದು, ರೈತರು ಭಯಭೀತರಾಗಿದ್ದಾರೆ.

ಸರಗೂರು ತಾಲೂಕಿನ ಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನುಗು ವನ್ಯಜೀವಿ ಧಾಮದಲ್ಲಿರುವ ಹೊಸಬಿರ್ವಾಳ್ ಗೆ ಮುಳ್ಳೂರು ಬೆಟ್ಟದಿಂದ ಬಂದ ಕಾಡಾನೆಗಳು ನೀರು ಕುಡಿದು ಕಬ್ಬಿನ ಗದ್ದೆಗೆ ನುಗ್ಗಿವೆ. ಕಾಡಾನೆಗಳನ್ನು ಕಂಡ ಸಾರ್ವಜನಿಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಕಾಡಾನೆಗಳನ್ನು ಓಡಿಸಲು ಮುಂದಾದಾಗ ಅವು ಅಡ್ಡಾದಿಟ್ಟಿಯಾಗಿ ಓಡಾಡಿ ರೈತರ ಜಮೀನಿಗೆ ನುಗ್ಗಿ ಕಬ್ಬು ಸೇರಿದಂತೆ ಇತರೆ ಬೆಳೆಗಳನ್ನು ನಾಶ ಮಾಡಿವೆ.

ಕಾಡಾನೆಗಳನ್ನು ಕಾಡಿಗೆ ಅಟ್ಟಲು ಅರಣ್ಯ ಅಧಿಕಾರಿಗಳು ಹಲವು ಪ್ರಯತ್ನ ಮಾಡಿದರೂ ಜನ ಸ್ಥಳಕ್ಕೆ ತಂಡೋಪತಂಡವಾಗಿ ಬಂದು ಗದ್ದಲ ಎಬ್ಬಿಸಿದ್ದರಿಂದ ಪರದಾಡುವಂತಾಯಿತು. ನುಗು ವನ್ಯಜೀವಿ ಧಾಮದ ವಲಯ ಅರಣ್ಯಾಧಿಕಾರಿ ನಿವೇದಿತಾ ಮಾತನಾಡಿ, ಕಾಡಾನೆಗಳು ಆಹಾರ ಹುಡುಕುತ್ತಾ ಮುಳ್ಳೂರು ಬೆಟ್ಟದಿಂದ ಹೊಸ ಬಿರ್ವಾಳು ಕಡೆ ಬಂದಿವೆ. ಇವುಗಳನ್ನು ಕಾಡಿಗೆ ಓಡಿಸಲು ನಾವು ಮತ್ತು ನಮ್ಮ ಸಿಬ್ಬಂದಿ ಸಾಕಷ್ಟು ಪಯತ್ನ ಮಾಡುತ್ತಿರುವುದಾಗಿ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು