ನಂಜನಗೂಡು: ತಾಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ ಬಿರುಗಾಳಿ ಸಹಿತ ಸುರಿದ ಆಲಿಕಲ್ಲು ಮಳೆಗೆ ಬಾಳೆ ಬೆಳೆ ನೆಲಕಚ್ಚಿದೆ.
ಗ್ರಾಮದ ರೈತರಾದ ಪರಶಿವಪ್ಪ, ಮಹದೇವಪ್ಪ, ಮಹೇಶ್, ರವಿ ಮತ್ತು ರಾಜು ರವರ ಸುಮಾರು 20 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ರಾತ್ರಿ ಮತ್ತು ಇಂದು ಮಧ್ಯಾಹ್ನ ಸುರಿದ ಬಿರುಗಾಳಿ ಸಹಿತ ಧಾರಾಕಾರ ಆಲಿಕಲ್ಲು ಮಳೆಗೆ ರೈತರು ಬೆಳೆದಿದ್ದ ತರಕಾರಿ ಬೆಳೆಗಳು ಕೂಡ ಮಳೆಗೆ ಸಿಲುಕಿವೆ.
ಸಾಲ ಸೋಲ ಮಾಡಿ ಬೆಳೆದ ಬೆಳೆಯೂ ಕೈಗೆಟುಕುವ ಅಷ್ಟರಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ರೈತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಸರ್ಕಾರ ನಷ್ಟ ಅನುಭವಿಸಿದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯ ಮಾಡಿದ್ದಾರೆ.