News Karnataka Kannada
Friday, May 03 2024
ಮೈಸೂರು

ನಂಜನಗೂಡು: ಕಾವೇರಿ ನೀರಿಗಾಗಿ ಬೀದಿಗಿಳಿದ ಪುಟಾಣಿಗಳು

Nanjangud: Children take to the streets for Cauvery water
Photo Credit : News Kannada

ನಂಜನಗೂಡು:  ಕಾವೇರಿ ನೀರಿಗಾಗಿ ಪುಟಾಣಿ ಮಕ್ಕಳು ಬೀದಿಗಳಿದು ಪ್ರತಿಭಟಿಸಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ.

ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ಖಂಡಿಸಿ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಂಜನಗೂಡು ಬಂದ್ ಯಶಸ್ವಿಯಾಗಿದ್ದು, ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ನಡೆಸಲಾದ ಪ್ರತಿಭಟನೆಯಲ್ಲಿ ಪುಟಾಣಿ ಮಕ್ಕಳು ಕಾವೇರಿ ನಮ್ಮದು, ರಕ್ತ ಕೊಟ್ಟೆವು ನೀರು ಬಿಡೆವು ಎಂದು ಪೋಸ್ಟರ್ ಹಿಡಿದು, ರಸ್ತೆಗಿಳಿದು ಪ್ರತಿಭಟನೆ ನಡೆಸಿರುವುದು ಎಲ್ಲರ ಗಮನ ಸೆಳೆಯಿತು.

ವರನಟ ಡಾ. ರಾಜಕುಮಾರ್, ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಹಾಗೂ ನಟ ಪುನೀತ್ ರಾಜಕುಮಾರ್ ಭಾವಚಿತ್ರವಿರುವ ಪೋಟೋ ಹಾಗೂ ಭಾವುಟ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ಪುಟಾಣಿ ಮಕ್ಕಳನ್ನು ಗಮನಿಸಿದ ಪೊಲೀಸರು ಪೋಸ್ಟರ್ ಮತ್ತು ಬಾವುಟವನ್ನು ಕಿತ್ತು ಪ್ರತಿಭಟನಾ ಸ್ಥಳದಿಂದ ಹೊರಗೆ ಕಳುಹಿಸಿದ್ದಾರೆ.
ಸಮಾಜದ ಮುಖಂಡ ಹೇಮಂತ್ ಕುಮಾರ್ ಮಾತನಾಡಿ, ಪದೇ ಪದೇ ಕಾವೇರಿ ವಿಚಾರ ಮುನ್ನೆಲೆಗೆ ಬರುತ್ತಿದೆ.  ಒಳ ಒಪ್ಪಂದ ಮಾಡಿಕೊಂಡು ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಒಂದು ಬೆಳೆ ತೆಗೆಯುವುದೇ ಕಷ್ಟವಾಗಿದೆ ಇಂತಹ ಸಂದರ್ಭದಲ್ಲಿ ತಮಿಳುನಾಡು ವರ್ಷಕ್ಕೆ ಮೂರು ಬೆಳೆಯನ್ನು ತೆಗೆಯುತ್ತಿದ್ದಾರೆ. ಈಗಾಗಲೇ ಸಾಕಷ್ಟು ನೀರನ್ನು ಬಿಟ್ಟಿದ್ದಾರೆ. ಕೂಡಲೇ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ನಿಲ್ಲಿಸಬೇಕು ಎಂದು ಒತ್ತಾಯ ಮಾಡಿದರು.

ಪ್ರತಿಭಟನೆಯಲ್ಲಿ ಭಾವಸಾರ ಕ್ಷತ್ರಿಯ ಸಮಾಜದ ಮುಖಂಡರು ಹಾಗೂ ಮಹಿಳೆಯರು ಭಾಗವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು