News Karnataka Kannada
Saturday, May 18 2024
ಮೈಸೂರು

ನಂಜನಗೂಡು: ಸಚಿವ ಅಶ್ವತ್ ನಾರಾಯಣ್ ವಿರುದ್ಧ ಕಾಂಗ್ರೆಸ್ಸಿಗರ ಬೃಹತ್ ಪ್ರತಿಭಟನೆ

ಪ್ರತಿಭಟನೆ
Photo Credit : News Kannada

ನಂಜನಗೂಡು: ನಂಜನಗೂಡಿನಲ್ಲಿ ಸಚಿವ ಅಶ್ವತ್ ನಾರಾಯಣ್ ವಿರುದ್ಧ ಕಾಂಗ್ರೆಸ್ಸಿಗರು ಹಾಗೂ ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಟಿಪ್ಪು ಸುಲ್ತಾನ್ ಹತ್ಯೆ ಮಾಡಿದಂತೆ ಸಿದ್ದರಾಮಯ್ಯ ಅವರನ್ನು ಹತ್ಯೆ ಮಾಡಬೇಕು ಎಂದು ಬಿಜೆಪಿ ಸಭೆ ಒಂದರಲ್ಲಿ ಮಾತನಾಡಿದ್ದ ಸಚಿವ ಅಶ್ವಥ್ ನಾರಾಯಣ್ ಹೇಳಿಕೆಯನ್ನು ಖಂಡಿಸಿ ಇಂದು ನಂಜನಗೂಡು ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಗುಂಡ್ಲುಪೇಟೆ – ಮೈಸೂರು ರಾಷ್ಟ್ರೀಯ ಹೆದ್ದಾರಿ 612ರ ಹುಲ್ಲಹಳ್ಳಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿ, ಸಚಿವ ಅಶ್ವಥ್ ನಾರಾಯಣ್ ಪ್ರತಿಕೃತಿಗೆ ಚಪ್ಪಲಿ ಸೇವೆ ಮಾಡಿ ಬೆಂಕಿ ಹಚ್ಚಿ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ ಸಚಿವ ಅಶ್ವಥ್ ನಾರಾಯಣ್ ಹೇಳಿಕೆಯನ್ನು ಖಂಡಿಸಿ ಇಂದು ನಂಜನಗೂಡಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಸರ್ಕಾರ ಕೂಡಲೇ ಸಚಿವ ಅಶ್ವತ್ ನಾರಾಯಣ್ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು .

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಶಿವಮೂರ್ತಿ ಅವರಿಗೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು.
ಹೆದ್ದಾರಿ ರಸ್ತೆ ತಡೆ ಪ್ರತಿಭಟನೆಯಿಂದಾಗಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು