ನಂಜನಗೂಡು: ಹಾಡುಹಗಲೇ ವೈದ್ಯನ ಮನೆಗೆ ಖನ್ನ ಹಾಕಿದ ಖದೀಮರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಂಜನಗೂಡು ನಗರದಲ್ಲಿ ನಡೆದಿದೆ.
ನಂಜನಗೂಡು ನಗರದ ಹೌಸಿಂಗ್ ಬೋರ್ಡ್ ನಲ್ಲಿ ವೈದ್ಯ ಕ್ಲಿನಿಕ್ ಆಸ್ಪತ್ರೆಯ ಡಾ.ಶ್ರೀಧರ್ ವೈದ್ಯ ಎಂಬುವರ ಮನೆಯಲ್ಲಿ ಘಟನೆ ಈ ಘಟನೆ ನಡೆದಿದೆ.
ವಿದ್ಯಾನಗರದ ಟೆಂಪೋ ಸ್ಡ್ಯಾಂಡ್ ಬಳಿ ಕ್ಲಿನಿಕ್ ನಡೆಸುತ್ತಿರುವ ಡಾ.ಶ್ರೀಧರ್ ವೈದ್ಯ ರವರ ಮನೆಯಲ್ಲಿ ಮಧ್ಯಾಹ್ನ ಯಾರು ಇಲ್ಲದ ವೇಳೆ ದುಷ್ಕರ್ಮಿಗಳು ಕೈ ಚಳಕ ತೋರಿಸಿದ್ದಾರೆ.
ಮನೆ ಬೀಗ ಮುರಿದು ಒಳ ಪ್ರವೇಶಿಸಿರುವ ಕಳ್ಳರು 800 ಗ್ರಾಂ ಚಿನ್ನಾಭರಣಗಳನ್ನ ದೋಚಿ ಪರಾರಿಯಾಗಿದ್ದಾರೆ. ನಂಜನಗೂಡು ಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿದ್ದಾರೆ. ಖದೀಮರ ಬಲೆಗೆ ಪೊಲೀಸರು ಮುಂದಾಗಿದ್ದಾರೆ.
ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.